alex Certify ಈ ರಾಶಿ ವ್ಯಾಪಾರಿಗಳಿಗೆ ಇಂದು ಲಾಭದ ದಿನವಾಗಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿ ವ್ಯಾಪಾರಿಗಳಿಗೆ ಇಂದು ಲಾಭದ ದಿನವಾಗಿದೆ

ಮೇಷ : ಇಂದು ನೀವು ಹೊಸ ಅತಿಥಿಗಳನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮಗೆ ಲಾಭ ಕೂಡ ಆಗಲಿದೆ. ವೃತ್ತಿರಂಗದ ಎಲ್ಲಾ ಸಮಸ್ಯೆಗಳು ಶಮನವಾಗಲಿದೆ.

ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ.

ಹಬ್ಬದ ಹೊತ್ತಲ್ಲೇ ಭರ್ಜರಿ ಶುಭ ಸುದ್ದಿ: ಇನ್ಫೋಸಿಸ್ ನಲ್ಲಿ 45,000 ಪದವೀಧರರ ನೇಮಕಾತಿ, ಫ್ರೆಶರ್‌ಗಳಿಗೆ ಅವಕಾಶ

ವೃಷಭ : ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಾರ್ವಜನಿಕ ಜೀವನದಲ್ಲಿ ನಿಮಗೆ ಮನ್ನಣೆ ಸಿಗಲಿದೆ. ಕೌಟುಂಬಿಕ ಜೀವನದಲ್ಲಿ ಎಲ್ಲಾ ಮನಸ್ತಾಪಗಳು ದೂರಾಗಲಿದೆ. ಪ್ರವಾಸಕ್ಕೆ ತೆರಳುವ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ಮಾಡಲಿದ್ದೀರಿ.

ಮಿಥುನ : ಕೆಲಸದ ಒತ್ತಡದಿಂದ ಕಂಗೆಟ್ಟಿದ್ದ ನೀವು ವಿಶ್ರಾಂತಿ ಪಡೆಯಲಿದ್ದೀರಿ. ಕುಟುಂಬಸ್ಥರ ಜೊತೆ ಉತ್ತಮ ಸಮಯ ಕಳೆಯುವಿರಿ. ಇದರಿಂದ ಮಾನಸಿಕವಾಗಿ ನೆಮ್ಮದಿ ಅನುಭವಿಸಲಿದ್ದೀರಿ. ದೂರದ ಊರಿಗೆ ಪ್ರಯಾಣ ಬೆಳೆಸುವ ಸಂದರ್ಭ ಎದುರಾಗಬಹುದು.

ಕಟಕ : ಸುಳ್ಳಿನ ಮಾತುಗಳು ಬಹಳ ದಿನ ಬಾಳಿಕೆ ಬರುವುದಿಲ್ಲ. ಹೀಗಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಿ. ವಾಸ್ತವದಲ್ಲಿ ಬದುಕಲು ಆರಂಭಿಸಿ. ತಂದೆಯ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ.

BIG NEWS: ವಿಮಾನ ಪ್ರಯಾಣದಲ್ಲಿ ಶೇ.100 ಸಾಮರ್ಥ್ಯಕ್ಕೆ ಅವಕಾಶ

ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ. ಪೋಷಕರಿಂದ ಮಾರ್ಗದರ್ಶನ ಪಡೆದು ಉದ್ಯಮದಲ್ಲಿ ಬದಲಾವಣೆ ಮಾಡಲಿದ್ದೀರಿ.

ಕನ್ಯಾ : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಪತ್ನಿಯಿಂದ ಕೊಂಚ ಕಿರಿಕಿರಿ ಇರಲಿದೆ.

ತುಲಾ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಪದೇ ಪದೇ ಕೆಟ್ಟ ಕನಸು ಬೀಳುವುದರಿಂದ ಬೇಸತ್ತಿದ್ದೀರಾ. ಸೋಮವಾರದಂದು ಶಿವನಿಗೆ ರುದ್ರಾಭಿಷೇಕ ಮಾಡಿಸಿ. ಸಾರ್ವಜನಿಕ ಜೀವನದಲ್ಲಿ ಮೆಚ್ಚುಗೆ ಪಡೆಯುವಿರಿ.

ವೃಶ್ಚಿಕ : ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಮಾಡಬೇಕೆಂದು ಹರಸಾಹಸ ಪಡುತ್ತಿದ್ದೀರಿ. ಆದರೆ ಎಷ್ಟೇ ಪ್ರಯತ್ನದ ಬಳಿಕವೂ ಅದು ಸಾಧ್ಯವಾಗುವುದಿಲ್ಲ. ಇದರಿಂದ ನೀವು ಹತಾಶರಾಗುವಿರಿ. ಕೌಟುಂಬಿಕ ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗಬಹುದು.

ಧನು : ವ್ಯಾಪಾರಿಗಳಿಗೆ ಇದು ಲಾಭದ ದಿನವಾಗಿದೆ. ವಿದೇಶಿ ಗ್ರಾಹಕರು ಇಂದು ನಿಮ್ಮ ಭವಿಷ್ಯವನ್ನೇ ಬದಲಾಯಿಸಲಿದ್ದಾರೆ. ಸುಬ್ರಹ್ಮಣ್ಯ ದೇವರನ್ನು ಪ್ರಾರ್ಥನೆ ಮಾಡಿ. ಇದರಿಂದ ಕೆಲಸ ಕಾರ್ಯಗಳಲ್ಲಿ ಇರುವ ಎಲ್ಲಾ ಅಡತಡೆಗಳು ದೂರಾಗಲಿವೆ.

ಚಿಕ್ಕಮಗುವಿಗೆ ಕೊಡಲೇಬೇಡಿ ಈ ʼಆಹಾರʼ

ಮಕರ : ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸವನ್ನು ಇಂದು ಸಾಧಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಗುರುಗಳಿಂದ ಉತ್ತಮ ಮಾರ್ಗದರ್ಶನ ಸಿಗಲಿದೆ. ತಾಳ್ಮೆ ಕಾಯ್ದುಕೊಳ್ಳಿ. ಅವಸರದಲ್ಲಿ ನಾವು ಏನೂ ಸಾಧಿಸಲು ಸಾಧ್ಯವಿಲ್ಲ.

ಕುಂಭ : ನಿಮ್ಮ ಸಂಗಾತಿಗೆ ನೋವುಂಟು ಮಾಡಬೇಡಿ. ಆದಷ್ಟು ಮಾತಿನ ಮೇಲೆ ಹಿಡಿತವಿರಲಿ. ಸಂಬಂಧಿಗಳ ಜೊತೆ ವ್ಯವಹಾರ ನಡೆಸುವ ಮುನ್ನ ಆದಷ್ಟು ಜಾಗೃತೆ ವಹಿಸಿ. ಪೋಷಕರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಮೀನ : ಪುತ್ರಿಗೆ ಯೋಗ್ಯ ವರಾನ್ವೇಷಣೆ ಮಾಡುವಲ್ಲಿ ಯಶಸ್ಸು ಸಾಧಿಸುವಿರಿ. ಇದರಿಂದ ನಿಮ್ಮ ಪತ್ನಿಯು ಸಂತಸಗೊಳ್ಳಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ತಕ್ಕಮಟ್ಟಿಗಿನ ಲಾಭವಿದೆ. ವಾಹನ ಸವಾರಿ ಮಾಡುವ ಮುನ್ನ ಎಚ್ಚರಿಕೆ ಅತ್ಯಗತ್ಯ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...