alex Certify ಉಕ್ರೇನ್​ನಲ್ಲಿ ಗುಂಡಿನ ದಾಳಿಗೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಇಂದು ತಾಯ್ನಾಡಿಗೆ ವಾಪಸ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಕ್ರೇನ್​ನಲ್ಲಿ ಗುಂಡಿನ ದಾಳಿಗೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಇಂದು ತಾಯ್ನಾಡಿಗೆ ವಾಪಸ್​

ಉಕ್ರೇನ್​ನ ರಾಜಧಾನಿ ಕೀವ್​ನಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ವಿದ್ಯಾರ್ಥಿ ಹರ್ಜೋತ್​ ಸಿಂಗ್​ ಆಪರೇಷನ್​ ಗಂಗಾ ಯೋಜನೆಯ ಅಡಿಯಲ್ಲಿ ಇಂದು ತಾಯ್ನಾಡಿಗೆ ಮರಳಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಕೆ. ಸಿಂಗ್​ ಮಾಹಿತಿ ನೀಡಿದ್ದಾರೆ. ಉಕ್ರೇನ್​ – ರಷ್ಯಾ ಯುದ್ಧ ಬಿಕ್ಕಟ್ಟಿನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗಾಗಿ ಪ್ರಸ್ತುತ ಕೇಂದ್ರ ಸಚಿವ ವಿ.ಕೆ. ಸಿಂಗ್​ ಪೋಲೆಂಡ್​ನಲ್ಲಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್​, ಯುದ್ಧದ ಸಂದರ್ಭದಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ಭಾರತೀಯ ವಿದ್ಯಾರ್ಥಿ ತಮ್ಮ ಪಾಸ್​ಪೋರ್ಟ್​ನ್ನೂ ಕಳೆದುಕೊಂಡಿದ್ದರು. ಆದರೆ ಅವರು ನನ್ನೊಂದಿಗೆ ಸೋಮವಾರ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿಸಲು ಸಂತೋಷಪಡುತ್ತೇನೆ.

ಮನೆಯ ಆಹಾರ ಹಾಗೂ ಮನೆಯವರ ಆರೈಕೆಯಿಂದ ಅವರು ಶೀಘ್ರವೇ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಅಂತಾ ಟ್ವೀಟ್​ ಮಾಡಿದ್ದಾರೆ.

ಉಕ್ರೇನ್ ಹಾಗೂ ರಷ್ಯಾದ ನಡುವೆ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದೆಹಲಿ ಮೂಲದವರಾದ ಹರ್ಜೋತ್​ ಸಿಂಗ್​ ತಮ್ಮ ಸ್ನೇಹಿತರ ಜೊತೆ ಸೇರಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದರು. ಆದರೆ ಟ್ರೇನಿನಲ್ಲಿ ಸ್ಥಳಾವಕಾಶ ಸಿಗದ ಕಾರಣ ಕ್ಯಾಬ್​ ಮೂಲಕ ಪೊಲ್ಯಾಂಡ್​ ಗಡಿಯನ್ನು ಮುಟ್ಟಬೇಕೆಂದು ನಿರ್ಧರಿಸಿದ್ದರು. ಆದರೆ ಕ್ಯಾಬ್​ನ ಮೇಲೆ ಗುಂಡಿನ ದಾಳಿ ನಡೆದ ಕಾರಣ ಹರ್ಜೋತ್​ ಸಿಂಗ್​ ಗಾಯಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...