alex Certify ಉಕ್ರೇನ್ ವಿಚಾರವಾಗಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ: ಆಯ್ದ ಕೇಂದ್ರ ಸಚಿವರು ವಿದೇಶ ಪ್ರಯಾಣ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಕ್ರೇನ್ ವಿಚಾರವಾಗಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ: ಆಯ್ದ ಕೇಂದ್ರ ಸಚಿವರು ವಿದೇಶ ಪ್ರಯಾಣ ಸಾಧ್ಯತೆ

ಉಕ್ರೇನ್​ – ರಷ್ಯಾ ನಡುವಿನ ಯುದ್ಧದ ಮಧ್ಯೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ಪ್ರಧಾನಿ ಮೋದಿಯಿಂದ ನಿನ್ನೆ ಉನ್ನತ ಮಟ್ಟದ ಸಭೆ ನಡೆದಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಕೇಂದ್ರ ಸಚಿವರು ಉಕ್ರೇನ್​ನ ನೆರೆ ದೇಶಗಳಿಗೆ ತೆರಳಬಹುದು ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.

ಪ್ರಸ್ತುತ 16 ಸಾವಿರ ಮಂದಿ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಇವರೆಲ್ಲ ಬಂಕರ್​ಗಳು, ಬಾಂಬ್​ ಶೆಲ್ಟರ್​ಗಳು ಹಾಗೂ ಹಾಸ್ಟೆಲ್​​ನ ನೆಲಮಾಳಿಗೆಗಳಲ್ಲಿ ಅವಿತುಕೊಂಡಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳು ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್​ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಕಷ್ಟ ಅನುಭವಿಸುತ್ತಿರುವ ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ಉಕ್ರೇನ್​ನಿಂದ ವಿದ್ಯಾರ್ಥಿಗಳನ್ನು ಮರಳಿ ತರಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕುತ್ತಲೇ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...