alex Certify ಉಚಿತ ಸಾಮೂಹಿಕ ವಿವಾಹ ಯೋಜನೆ ‘ಸಪ್ತಪದಿ’ ಗೆ ಮತ್ತೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಸಾಮೂಹಿಕ ವಿವಾಹ ಯೋಜನೆ ‘ಸಪ್ತಪದಿ’ ಗೆ ಮತ್ತೆ ಚಾಲನೆ

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ವಿವಾಹ ಸಂದರ್ಭದಲ್ಲಿ ದುಂದುವೆಚ್ಚ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದೆಂಬ ಕಾರಣಕ್ಕೆ ರಾಜ್ಯ ಸರ್ಕಾರ ‘ಸಪ್ತಪದಿ’ ಯೋಜನೆಯನ್ನು ಜಾರಿಗೊಳಿಸಿದ್ದು, ಆದರೆ ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಈ ಯೋಜನೆ ಸ್ಥಗಿತಗೊಂಡಿತ್ತು.

ಇದೀಗ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕಾರ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡಿದ್ದು, ಈ ಹಿನ್ನೆಲೆಯಲ್ಲಿ ಸಪ್ತಪದಿ ಯೋಜನೆಯನ್ನು ಮತ್ತೆ ಜಾರಿಗೊಳಿಸಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಿರ್ಧರಿಸಿದ್ದಾರೆ. ಹೀಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಯ್ದ ದೇವಸ್ಥಾನಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿಸಲು ಆದೇಶಿಸಲಾಗಿದೆ.

ಆಯ್ದ ಎ ಗ್ರೇಡ್ ದೇವಾಲಯಗಳಲ್ಲಿ ಏಪ್ರಿಲ್ 28, ಮೇ 11 ಮತ್ತು ಮೇ 25ರಂದು ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವುದರ ಜೊತೆಗೆ ವಧು ಮತ್ತು ವರನ ಸಂಬಂಧಿಕರಿಗೆ ದೇವಾಲಯದಲ್ಲಿ ಊಟೋಪಚಾರದ ವ್ಯವಸ್ಥೆಯನ್ನು ಆಡಳಿತ ಮಂಡಳಿಗಳು ಕಲ್ಪಿಸಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...