alex Certify BIG NEWS: ಉತ್ತರ ಕರ್ನಾಟಕದ ದೇವಾಲಯಗಳಿಗೆ ಹೆಚ್ಚಿನ ಅನುದಾನ ನೀಡಿದ ಶಶಿಕಲಾ ಜೊಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉತ್ತರ ಕರ್ನಾಟಕದ ದೇವಾಲಯಗಳಿಗೆ ಹೆಚ್ಚಿನ ಅನುದಾನ ನೀಡಿದ ಶಶಿಕಲಾ ಜೊಲ್ಲೆ

ಬೆಂಗಳೂರು- ಸವದತ್ತಿ ಯಲ್ಲಮ್ಮ ದೇವಸ್ಥಾನ, ದತ್ತಾತ್ರೇಯ ಸ್ವಾಮಿ ದೇವಾಲಯ, ಗಾಣಗಾಪುರಕ್ಕೆ ಮತ್ತು ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನ, ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ ತಲಾ 3 ಕೋಟಿ ಅನುದಾನ ಬಿಡುಗಡೆಗೊಳಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ.

ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳಿಗೆ ಇದೀಗ ಸಚಿವೆ ಶಶಿಕಲಾ ಜೊಲ್ಲೆ ಹೆಚ್ಚಿನ ಅನುದಾನ ನೀಡಲು ಮುಂದಾಗಿದ್ದಾರೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಪತ್ರಿಕಾ ಪ್ರಕಟಣೆ ಮೂಲಕ ಈ ವಿಚಾರ ತಿಳಿಸಿದ್ದಾರೆ. ಇನ್ನು ರಾಜ್ಯದಿಂದ ಹೆಚ್ಚು ಭಕ್ತರನ್ನ ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠದ ವಿಶೇಷ ಅನುದಾನವನ್ನು ಮುಜರಾಯಿ ಇಲಾಖೆಯ ವತಿಯಿಂದ ನೀಡಲಾಗುತ್ತಿದೆ.

ಕಳೆದ ವರ್ಷ ಡಿಸೆಂಬರ್‌ ನಲ್ಲಿ ನಡೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ‌ ನಿರ್ಧಾರ ತಗೆದುಕೊಳ್ಳಲಾಗಿತ್ತು. ಅದರಂತೆ ಇದೀಗ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಅನುದಾನವನ್ನು ಬಳಸಿಕೊಂಡು ದೇವಸ್ಥಾನಗಳನ್ನು ಅಭಿವೃದ್ದಿಗೊಳಿಸಲು ಅಧಿಕಾರಿಗಳಿಗೆ ಹಾಗೂ ದೇವಸ್ಥಾನಗಳ ವ್ಯವಸ್ಥಾಪನ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...