alex Certify ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾತ್ರಿ ಹೊತ್ತು ಅವರು ತೆರಳುತ್ತಿದ್ದ ಸಂದರ್ಭದಲ್ಲಿ ಆಟೋ ಹಾಗೂ ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಆಯುಧಗಳನ್ನು ತೋರಿಸಿ, ಹೆದರಿಸಿ ಅವರ ಬಳಿಯಿದ್ದ 3 ಲಕ್ಷ ರೂ. ನಗದು ಹಾಗೂ ಚಿನ್ನದ ರಿಂಗ್ ಗಳನ್ನು ದೋಚಿ ಪರಾರಿಯಾಗಿದ್ದಾರೆ.

ಈ ಕುರಿತು ಉದ್ಯಮಿ ಮನ್ಸೂರ್ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನ್ಸೂರ್ ತರಕಾರಿ ಉದ್ಯಮಿ ಎಂದು ಗುರುತಿಸಲಾಗಿದೆ.

ಅಬ್ದುಲ್ ರೆಹಮಾನ್, ನಜೀರ್, ಅಬ್ದುಲ್ ಅಜೀಜ್, ಫಿರೋಜ್, ಹಸನ್ ಬಾವ, ರಹೀಂ, ಯೂಸುಫ್, ಇಲಿಯಾಸ್ ಎಂಬುವವರು ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...