alex Certify ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ 3 ದಿನ ಶೋಕಾಚರಣೆ ಮಾಡಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ 3 ದಿನ ಶೋಕಾಚರಣೆ ಮಾಡಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನದ ಶೋಕಾಚರಣೆಗೆ ಸೂಚನೆ ನೀಡಿದೆ.

ಈ ಕುರಿತಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಮೇಶ್ ಕತ್ತಿ ಅವರು ಹಾಲಿ ಸಚಿವರಾಗಿದ್ದರು. ಹೀಗಾಗಿ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಮಾಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಗಾಗಿ ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ಅವರು ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದವರು ಎಂದು ಬಣ್ಣಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...