alex Certify ಉಮೇಶ್ ಕತ್ತಿ ಸಮಾಧಿಗೆ ಕುಟುಂಬದಿಂದ ಪೂಜೆ; ಗುಟ್ಕಾ ಪ್ಯಾಕೇಟ್ ಇಟ್ಟು ನಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಮೇಶ್ ಕತ್ತಿ ಸಮಾಧಿಗೆ ಕುಟುಂಬದಿಂದ ಪೂಜೆ; ಗುಟ್ಕಾ ಪ್ಯಾಕೇಟ್ ಇಟ್ಟು ನಮನ

ಚಿಕ್ಕೋಡಿ: ಹೃದಯಾಘಾತದಿಂದ ವಿಧಿವಶರಾಗಿದ್ದ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಸಮಾಧಿಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಕುಟುಂಬದವರು ಪೂಜೆ ಸಲ್ಲಿಸಿದರು.

ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಸೇರಿದಂತೆ ಕುಟುಂಬ ಸದಸ್ಯರು ಪುರೋಹಿತರ ಮಾರ್ಗದರ್ಶನದಲ್ಲಿ ಉಮೇಶ್ ಕತ್ತಿ ಸಮಾಧಿಗೆ ಪೂಜೆ ಸಲ್ಲಿಸಿದರು. ಉಮೇಶ್ ಕತ್ತಿಗೆ ಇಷ್ಟವಾಗಿದ್ದ ತಿಂಡಿ, ತಿಸುಗಳನ್ನು ಹಾಗೂ ಅವರಿಷ್ಟದ ಗುಟ್ಕಾ ಪ್ಯಾಕೇಟ್ ಗಳನ್ನು ಇಟ್ಟು ಪೂಜೆ ಸಲ್ಲಿಸಿದ್ದು ಗಮನ ಸೆಳೆಯಿತು.

ಹೃದಯಾಘಾತದಿಂದ ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು. ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿ ಸ್ವಗ್ರಾಮದಲ್ಲಿ ನಿನ್ನೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದು ಉಮೇಶ್ ಕತ್ತಿ ಅವರ ಸಮಾಧಿಗೆ ಕುಟುಂಬದವರು ಪೂಜೆ ನೆರವೇರಿಸಿದ್ದು, ಇಂದು ಕೂಡ ಉಮೇಶ್ ಕತ್ತಿ ಬೆಂಬಲಿಗರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮಾಧಿ ಬಳಿ ಬಂದು ಪೂಜೆ ಮಾಡಿ ನಮನ ಸಲ್ಲಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...