alex Certify ‘ಒಮಿಕ್ರಾನ್’ ಪತ್ತೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಸ್ಟ್ರಿಕ್ಟ್ ರೂಲ್ಸ್….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಒಮಿಕ್ರಾನ್’ ಪತ್ತೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಸ್ಟ್ರಿಕ್ಟ್ ರೂಲ್ಸ್….?

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದ ‘ಒಮಿಕ್ರಾನ್’ ಸೋಂಕು ಪ್ರಕರಣ ಈಗ ಭಾರತಕ್ಕೂ ವಕ್ಕರಿಸಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಅವರುಗಳ ಆರೋಗ್ಯ ಸಮಸ್ಯೆಯಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲವೆನ್ನಲಾಗಿದೆ. ಈ ಇಬ್ಬರೂ ಸಹ ಕೊರೊನಾದ 2 ಡೋಸ್ ಲಸಿಕೆಯನ್ನು ಪಡೆದಿದ್ದು, ಈ ಕಾರಣಕ್ಕಾಗಿಯೇ ಒಮಿಕ್ರಾನ್ ಸೋಂಕು ತಗುಲಿದರೂ ಸಹ ಹೆಚ್ಚಿನ ಆರೋಗ್ಯ ಸಮಸ್ಯೆ ಆಗಿಲ್ಲವೆಂದು ಹೇಳಲಾಗಿದೆ.

ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಚಿವ ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುತ್ತದೆಯಾ ಎಂಬ ಪ್ರಶ್ನೆ ಮೂಡಿದೆ. ಮೂಲಗಳ ಪ್ರಕಾರ ಲಸಿಕೆ ನೀಡುವ ವೇಗವನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರು ಗುಂಪುಗುಂಪಾಗಿ ಸೇರುವ ಸ್ಥಳಗಳಿಗೆ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಗೌತಮ್​ ಅದಾನಿ – ಸಿಎಂ ಮಮತಾ ಬ್ಯಾನರ್ಜಿ ಮಹತ್ವದ ಚರ್ಚೆ: ಕುತೂಹಲ ಮೂಡಿಸಿದೆ ಈ ಭೇಟಿ

ಇದನ್ನು ಹೊರತುಪಡಿಸಿ ಇನ್ನಿತರೆ ಯಾವುದೇ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಸಾಧ್ಯತೆ ಇಲ್ಲವೆನ್ನಲಾಗಿದ್ದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಕಡೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಸರ್ಕಾರದ ವತಿಯಿಂದ ಆಗಲಿದೆ. ಜೊತೆಗೆ ದೇಶಿಯ ಹಾಗು ಅಂತರರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳುವ ನಿರೀಕ್ಷೆಯಿದೆ. ಅಲ್ಲದೆ ಅಂತರ್‌ ರಾಜ್ಯ ಗಡಿಯಲ್ಲೂ ಸಹ ನಿಗಾ ವಹಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...