alex Certify ಒಳಚರಂಡಿ ಕಾಮಗಾರಿ ವೇಳೆ ನಾಲ್ವರು ಕಾರ್ಮಿಕರ ದುರ್ಮರಣ: ವ್ಯಾಪಕ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳಚರಂಡಿ ಕಾಮಗಾರಿ ವೇಳೆ ನಾಲ್ವರು ಕಾರ್ಮಿಕರ ದುರ್ಮರಣ: ವ್ಯಾಪಕ ಆಕ್ರೋಶ

ಸೊಲ್ಲಾಪುರ: ಒಳಚರಂಡಿ ವ್ಯವಸ್ಥೆ ಕಾಮಗಾರಿ ವೇಳೆ ನಾಲ್ವರು ನಗರಸಭೆ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದಲ್ಲಿ ಸಂಭವಿಸಿದೆ.

ಗುರುವಾರ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಬೆಳಗ್ಗೆ ಅವರು ಕೂಡ ಮೃತಪಟ್ಟಿದ್ದಾರೆ.

ಸೊಲ್ಲಾಪುರ ನಗರಸಭೆಯ ನಿರ್ಲಕ್ಷ್ಯದಿಂದಲೇ ಈ ಅನಾಹುತ ಸಂಭವಿಸಿದೆ. ಒಳಚರಂಡಿ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಪರಿಕರಗಳನ್ನು ನಗರಸಭೆ ನೀಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಾರ್ಮಿಕರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಈ ದುರ್ಘಟನೆಯನ್ನು ಸಾಮಾಜಿಕ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು, ಕಾಮಗಾರಿಯಲ್ಲಿ ತೊಡಗಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...