alex Certify ಕಬ್ಬಿನ ಗದ್ದೆಯಲ್ಲಿ ಆಕಸ್ಮಿಕ ಬೆಂಕಿ; 4 ಎಕರೆ ಬೆಳೆ ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬಿನ ಗದ್ದೆಯಲ್ಲಿ ಆಕಸ್ಮಿಕ ಬೆಂಕಿ; 4 ಎಕರೆ ಬೆಳೆ ಸುಟ್ಟು ಭಸ್ಮ

ಚಾಮರಾಜನಗರ: ನಾಲ್ಕು ಎಕರೆ ಕಬ್ಬಿನ ಗದ್ದೆಗೆ ಏಕಾಏಕಿ ಬೆಂಕಿ ಬಿದ್ದಿದ್ದು, ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮುಕ್ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮರಿಸ್ವಾಮಿ ಹಾಗೂ ಮಂಜು ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದ್ದು, ನಾಲ್ಕು ಎಕರೆ ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಕಟಾವಿನ ಹಂತಕ್ಕೆ ಬಂದಿದ್ದ ಕಬ್ಬಿನ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿರುವುದನ್ನು ಕಂಡು ರೈತರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...