alex Certify ಕರಾವಳಿ To ಕುಂದಾನಗರಿ; ಬೆಳಗಾವಿ ಕಾಲೇಜಿಗೂ ವ್ಯಾಪಿಸಿದ ಹಿಜಾಬ್ ವಿವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ To ಕುಂದಾನಗರಿ; ಬೆಳಗಾವಿ ಕಾಲೇಜಿಗೂ ವ್ಯಾಪಿಸಿದ ಹಿಜಾಬ್ ವಿವಾದ

ಬೆಳಗಾವಿ: ಕರಾವಳಿ ಕಾಲೇಜುಗಳಲ್ಲಿ ಆರಂಭವಾಗಿರುವ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ರಾಜ್ಯದ ಇತರ ಕಾಲೇಜುಗಳಿಗೂ ವ್ಯಾಪಿಸುತ್ತಿದ್ದು, ಬೆಳಗಾವಿ ಜಿಲ್ಲೆಯ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದು ವಸ್ತ್ರಸಂಹಿತೆ ಸಂಘರ್ಷ ಆರಂಭಿಸಲು ಯತ್ನಿಸಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ.

ವಿದ್ಯಾರ್ಥಿಗಳು ಧರಿಸಿದ್ದ ಕೇಸರಿ ಶಾಲು ತೆಗೆಸಿ, ಇಂತಹ ಸಂಘರ್ಷಗಳಿಗೆ ಕಾರಣವಾಗದಂತೆ ತಿಳಿ ಹೇಳಿದ್ದಾರೆ. ಅಲ್ಲದೇ ಕಾಲೇಜಿಗೆ ಸಂಬಂಧಪಡದವರು ಕೂಡ ಕಾಲೇಜು ಕ್ಯಾಂಪಸ್ ನಲ್ಲಿ ಓಡಾಡುತ್ತಿದ್ದ ಬಗ್ಗೆಯೂ ಬೆಳಕಿಗೆ ಬಂದಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...