alex Certify ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ದಾಖಲಾಗಿ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು ಇದರಿಂದ ಬಹಳ ಅನುಕೂಲವಾಗಿತ್ತು.

ಆದರೆ 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಕೋರ್ಸ್ ಗಳಿಗೆ ದೆಹಲಿಯ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ದ ಮಾನ್ಯತೆ ಸಿಗದಿರುವ ಕಾರಣ ಸುಮಾರು 90 ಸಾವಿರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು.

ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್. ವಿದ್ಯಾಶಂಕರ್, ಈ ಕುರಿತು ಶುಭ ಸುದ್ದಿ ನೀಡಿದ್ದು, 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ ಕೋರ್ಸ್ ಗೆ ಯುಜಿಸಿ ಮಾನ್ಯತೆ ಮಾತ್ರ ಇಲ್ಲ. ಆದರೆ ರಾಜ್ಯ ಸರ್ಕಾರದ ಮಾನ್ಯತೆ ಇದೆ. ಇದರ ಜೊತೆಗೆ ಯುಜಿಸಿ ಮಾನ್ಯತೆ ಪಡೆದುಕೊಳ್ಳುವ ಪ್ರಯತ್ನ ನಡೆದಿದ್ದು, ಇನ್ನು ಒಂದು ತಿಂಗಳಲ್ಲಿ ಇದು ಲಭ್ಯವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...