alex Certify ಕಲಾ ತಂಡಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಾ ತಂಡಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ

ಕಲಾ ತಂಡಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಈ ಮೊದಲು ನೀಡುತ್ತಿದ್ದ 5 ಲಕ್ಷ ರೂಪಾಯಿ ಧನಸಹಾಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದ ಕಲಾ ತಂಡಗಳಿಗೆ ವಾರ್ಷಿಕ 5 ಲಕ್ಷ ರೂಪಾಯಿ ಧನ ಸಹಾಯವನ್ನು ನೀಡಲಾಗುತ್ತಿದ್ದು, ಇದನ್ನು 2 ಲಕ್ಷ ರೂಪಾಯಿಗಳಿಗೆ ಇಳಿಕೆ ಮಾಡಲಾಗಿತ್ತು.

ಆದರೆ ಇದನ್ನು ಕಲಾ ತಂಡಗಳು ವಿರೋಧಿಸಿದ್ದು ಸರ್ಕಾರದ ಗಮನಕ್ಕೂ ತರಲಾಗಿತ್ತು. ಇದೀಗ ಸರ್ಕಾರದ ಸೂಚನೆಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 5 ಲಕ್ಷ ರೂಪಾಯಿ ಧನ ಸಹಾಯ ಮುಂದುವರಿಸಲು ಆದೇಶ ಹೊರಡಿಸಿದೆ. ಜೊತೆಗೆ ಡಿಸೆಂಬರ್ ಅಂತ್ಯದೊಳಗೆ ಮೂರು ಕಾರ್ಯಕ್ರಮ ಮುಗಿಸಬೇಕೆಂಬ ಆದೇಶವನ್ನು ಮಾರ್ಪಡಿಸಿ ವರ್ಷದಲ್ಲಿ ಮೂರು ಕಾರ್ಯಕ್ರಮ ಎಂದು ತಿದ್ದುಪಡಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...