alex Certify ಕಳ್ಳ ಬೇಟೆಗಾರರ ಪಾಲಿಗೆ ಸಿಂಹಸ್ವಪ್ನವಾಗಿದ್ದ ‘ರಾಣಾ’ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳ್ಳ ಬೇಟೆಗಾರರ ಪಾಲಿಗೆ ಸಿಂಹಸ್ವಪ್ನವಾಗಿದ್ದ ‘ರಾಣಾ’ ಇನ್ನಿಲ್ಲ

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಶ್ವಾನದಳದ ಜರ್ಮನ್ ಶಫರ್ಡ್ ‘ರಾಣಾ’ ವಿಧಿವಶವಾಗಿದೆ. ಕಳ್ಳ ಬೇಟೆಗಾರರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಈ ಶ್ವಾನ ವಯೋಸಹಜ ಕಾರಣಗಳಿಂದಾಗಿ ಮಂಗಳವಾರ ಮೃತಪಟ್ಟಿದೆ.

ಸೋಮವಾರ ರಾತ್ರಿ ರಾಣಾ ಆರೋಗ್ಯ ಹದೆಗೆಟ್ಟಿದ್ದು, ಚಿಕಿತ್ಸೆಯನ್ನು ಕೊಡಲಾಗಿತ್ತು. ಆದರೆ ಇದಕ್ಕೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದೆ. ಇದರ ಅಂತಿಮ ದರ್ಶನದ ವ್ಯವಸ್ಥೆಯನ್ನು ಮೇಲುಕಾಮನಹಳ್ಳಿಯಲ್ಲಿರುವ ಸಫಾರಿ ಟಿಕೆಟ್ ಕೇಂದ್ರದ ಬಳಿ ಮಾಡಲಾಗಿತ್ತು.

ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು ಈ ಸಂದರ್ಭದಲ್ಲಿ ವಿವಿಧ ವಲಯಗಳ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು. ರಾಣಾನ ಸಾಹಸದ ಪರಿಚಯವಿದ್ದ ಪ್ರಾಣಿ ಪ್ರಿಯರು ಇದರ ಗುಣಗಾನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...