alex Certify ಕಾಂಗ್ರೆಸ್ ಗೆ ಬಿಗ್ ಶಾಕ್; ಜೆಡಿಎಸ್ ಸೇರ್ಪಡೆಯಾದ ಡಾ. ದೇವರಾಜ್ ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಬಿಗ್ ಶಾಕ್; ಜೆಡಿಎಸ್ ಸೇರ್ಪಡೆಯಾದ ಡಾ. ದೇವರಾಜ್ ಪಾಟೀಲ್

ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡಿರುವ ಡಾ. ದೇವರಾಜ್ ಪಾಟೀಲ್ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.  ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾದ ದೇವರಾಜ್ ಪಾಟೀಲ್, ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬಿಡಬೇಕು ಎಂಬ ವಿಚಾರ ಇರಲಿಲ್ಲ. ಆದರೆ ನನ್ನ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರಲ್ಲಿ ಅಭಿಪ್ರಾಯ ಸರಿ ಇಲ್ಲ. ನನ್ನ ಬಗ್ಗೆ ಮಾತನಾಡಿದ್ದಕ್ಕೆ ಮನನೊಂದು ಪಕ್ಷ ತೊರೆದಿದ್ದೇನೆ ಎಂದು ಹೇಳಿದರು.

ಬಾದಾಮಿಯಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಜೆಡಿಎಸ್ ನಿಂದ ನಾನು ಸ್ಪರ್ಧಿಸಿ ಜನರಿಗೆ ಒಂದು ಹೊಸ ಅವಕಾಶ ಕಲ್ಪಿಸಿದ್ದೇನೆ. ಹೊಸತನ, ಸ್ವಾಭಿಮಾನ, ರೈತರ ಪರವಾದ, ಉದ್ಯೋಗಾವಕಾಶ, ಗ್ರಾಮೀಣ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮತ ಕೇಳುತ್ತೇನೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...