alex Certify ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿಲ್ಲ; ಅವರ ಪಕ್ಷದಲ್ಲಿರುವ ಹೆಗ್ಗಣವನ್ನು ಮೊದಲು ನೋಡಿಕೊಳ್ಳಲಿ; ಬಿಜೆಪಿ ನಾಯಕರಿಗೆ ಡಿ.ಕೆ.ಶಿ. ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿಲ್ಲ; ಅವರ ಪಕ್ಷದಲ್ಲಿರುವ ಹೆಗ್ಗಣವನ್ನು ಮೊದಲು ನೋಡಿಕೊಳ್ಳಲಿ; ಬಿಜೆಪಿ ನಾಯಕರಿಗೆ ಡಿ.ಕೆ.ಶಿ. ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಯಾವುದೇ ಬಣ ರಾಜಕೀಯವಿಲ್ಲ, ಬಿಜೆಪಿ ನಾಯಕರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿರುವುದಾದರೂ ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ವ್ಯಕ್ತಿ ಪೂಜೆ ಮಾಡದಂತೆ ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ನಿನ್ನೆ ಕಾರ್ಯಕರ್ತರು ಘೋಷಣೆ ಕೂಗಿದ್ದಕ್ಕೆ ವೇದಿಕೆಯಲ್ಲಿಯೇ ಬೈದಿದ್ದೇನೆ. ನಮ್ಮ ಪಕ್ಷವನ್ನು ನಾವು ಹೇಗೆ ನಡೆಸಬೇಕು ಎಂಬುದು ನಮಗೆ ಗೊತ್ತು. ನಮ್ಮ ಬಗ್ಗೆ ಬಿಜೆಪಿ ನಾಯಕರು ಮಾತನಾಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ಕಡಿಮೆಯಾಯ್ತು ಟೀಂ ಇಂಡಿಯಾಕ್ಕಿದ್ದ ದೊಡ್ಡ ತಲೆನೋವು

ಬಿಜೆಪಿ ಪಕ್ಷದಲ್ಲಿಯೇ ಹೆಗ್ಗಣವಿದೆ ಅದನ್ನು ಮೊದಲು ನೋಡಿಕೊಳ್ಳಲಿ. ಹೀಗಿರುವಾಗ ಕಾಂಗ್ರೆಸ್ ನಾಯಕರತ್ತ ಆರೋಪ ಮಾಡುತ್ತಿರುವುದೇಕೆ ? ನಮ್ಮ ಪಕ್ಷದ ವಿಚಾರವಾಗಿ ಅವರೇನು ಟ್ವೀಟ್ ಮಾಡುವುದು ? ಯಾರೋ ಮೆಂಟಲ್ ಗಿರಾಕಿಗಳು ಮಾತನಾಡಿದ ಮಾತ್ರಕ್ಕೆ ನಾನು ಉತ್ತರಿಸಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...