alex Certify ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು

ಬೆಂಗಳೂರು: ಕೋಮುಸೌಹಾರ್ದ ಕದಡುವ ಹೇಳಿಕೆ ನೀಡಿದ ಆರೊಪ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲಾಗಿದೆ.

ಶ್ರೀರಾಮಸೇನೆ ಬೆಂಗಳೂರು ಅಧ್ಯಕ್ಷ ಚಂದ್ರಶೇಖರ್ ಎಂಬುವವರು ಶಾಸಕ ಜಮೀರ್ ಅಹ್ಮದ್ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್ 15ರಂದು ತ್ರಿವರ್ಣ ಧ್ವಜಾರೋಹಣ, ಜನವರಿ 26ರಂದು ಧ್ವಜಾರೋಹಣ, ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶವಿದೆ. ಆದರೆ ಗಣೇಶ ಹಬ್ಬ ಆಚರಣೆಗೆ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದರು. ಶಾಸಕರ ಈ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...