alex Certify ಕಾಂಗ್ರೆಸ್ ಸಂಘರ್ಷದ ನಡುವೆ ಇಂದು ಹಾರ್ದಿಕ್ ತಂದೆಯ ಮೊದಲ ಪುಣ್ಯಸ್ಮರಣೆ; ಪಾಲ್ಗೊಳ್ಳಲು ನಾಯಕರ ಮೀನಾಮೇಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸಂಘರ್ಷದ ನಡುವೆ ಇಂದು ಹಾರ್ದಿಕ್ ತಂದೆಯ ಮೊದಲ ಪುಣ್ಯಸ್ಮರಣೆ; ಪಾಲ್ಗೊಳ್ಳಲು ನಾಯಕರ ಮೀನಾಮೇಷ

ಗುಜರಾತಿನ ಕಾಂಗ್ರೆಸ್ ಮತ್ತು ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲಿಯೇ ಗುರುವಾರ ಅಹಮದಾಬಾದ್ ನಲ್ಲಿ ಹಾರ್ದಿಕ್ ಪಟೇಲ್ ಅವರ ತಂದೆಯ ಮೊದಲ ಪುಣ್ಯಸ್ಮರಣೆಯ ಬಹುದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆದರೆ, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೇ ? ಬೇಡವೇ ? ಎಂಬುದನ್ನು ಕಾಂಗ್ರೆಸ್ ನಾಯಕರು ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್, ಹೋಗಬೇಕೇ ? ಬೇಡವೇ ಎಂಬುದರ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರೂ ಪಾಲ್ಗೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...