alex Certify ಕಾಂತಾರ ‘ವರಾಹ ರೂಪಂ’ ಹಾಡಿನ ತಡೆಯಾಜ್ಞೆ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂತಾರ ‘ವರಾಹ ರೂಪಂ’ ಹಾಡಿನ ತಡೆಯಾಜ್ಞೆ ತೆರವು

ಬೆಂಗಳೂರು: ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಕೇರಳ ಕೋರ್ಟ್ ತೆರವುಗೊಳಿಸಿದೆ.

ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೇರಳದ ಕೊಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವರಾಹ ರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಹಾಡಿನ ಬರಹಗಾರರ ಶಶಿಧರ್ ಕಾವೂರು, ಇಂದು ನ್ಯಾಯಾಲಯ ಎರಡೂ ಕಡೆ ವಾದ ಆಲಿಸಿ, ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿ ವಜಾಗೊಳಿಸಿದೆ. ಹಾಗೂ ವರಾಹ ರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ನ್ಯಾಯ ಗೆದ್ದಿದೆ. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ.

ಕಾಂತಾರ ಚಿತ್ರದ ವರಾಹರೂಪಂ ಹಾಡು ಕೃತಿಚೌರ್ಯ ಎಂದು ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಹಾಗೂ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಹಾಡಿಗೆ ತಡೆ ನೀಡಿತ್ತು. ಇದೀಗ ತಡೆಯಾಜ್ಞೆ ತೆರವುಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...