alex Certify ಕಾರು-ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮಗು ಸೇರಿ ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು-ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮತ್ತಿಘಟ್ಟ ಕ್ರಾಸ್ ಬಳಿ ನಡೆದಿದೆ.

ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಗಿರಿಧರ (46) ಹಾಗೂ ಮೂರು ವರ್ಷದ ಮಗು ಮಯಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊನ್ನಾವರದ ಸಂಬಂಧಿಕರ ಮನೆಗೆ ಮದುವೆಗೆಂದು ಗಿರಿಧರ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಕೇರಳದಿಂದ ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಕಾರು ಡಿಕ್ಕಿಯಾಗಿದೆ. ಟಿಟಿ ವಾಹನದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...