alex Certify ಕಾರ್ತಿಕ ಹುಣ್ಣಿಮೆ ದಿನ ದೀಪದಾನ: ದೀಪ ಪೂಜೆಗಿದೆ ಮಹತ್ವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ತಿಕ ಹುಣ್ಣಿಮೆ ದಿನ ದೀಪದಾನ: ದೀಪ ಪೂಜೆಗಿದೆ ಮಹತ್ವ

ಈ ಬಾರಿ ನವೆಂಬರ್ 08 ರಂದು ಕಾರ್ತಿಕ ಹುಣ್ಣಿಮೆಯನ್ನು ಆಚರಿಸಲಾಗ್ತಿದೆ. ಈ ದಿನ ದೀಪ ದಾನ, ಸ್ನಾನ, ಭಜನೆ, ಆರತಿ, ದಾನಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ವಿಷ್ಣು ಹಾಗೂ ಲಕ್ಷ್ಮಿಯನ್ನು ಶಾಸ್ತ್ರಗಳಂತೆ ಪೂಜೆ ಮಾಡುವುದ್ರಿಂದ ಸುಖ, ಸಮೃದ್ಧಿ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಹಾಗಾಗಿ ಈ ದಿನ ವಿಶೇಷ ಪೂಜೆ, ಭಜನೆ, ಕೀರ್ತನೆ, ದಾನವನ್ನು ಮಾಡಲಾಗುತ್ತದೆ.

ಕಾರ್ತಿಕ ಮಾಸದಲ್ಲಿ ದೀಪಕ್ಕೆ ವಿಶೇಷ ಮಹತ್ವವಿದೆ. ಕತ್ತಲನ್ನು ಹೋಗಲಾಡಿಸಿ ಬೆಳಕು ನೀಡುವ ಸಂಕೇತ ದೀಪ. ಹಾಗಾಗಿಯೇ ಕಾರ್ತಿಕ ಮಾಸದಲ್ಲಿ ದೀಪಾವಳಿ ಆಚರಣೆ ಮಾಡಲಾಗುತ್ತದೆ. ಕಾರ್ತಿಕ ಮಾಸದ ಪ್ರತಿಯೊಂದು ದಿನ ಮನೆಯ ಮುಖ್ಯದ್ವಾರ, ತುಳಸಿ, ದೇವರ ಮುಂದೆ ದೀಪ ಬೆಳಗಲಾಗುತ್ತದೆ. ಕಾರ್ತಿಕ ಮಾಸದಲ್ಲಿ ದಾನ, ಪವಿತ್ರ ನದಿಯಲ್ಲಿ ಸ್ನಾನ, ಪೂಜೆ ಮಾಡಬೇಕೆಂಬ ನಂಬಿಕೆಯಿದೆ. ಕಾರ್ತಿಕ ಮಾಸದಲ್ಲಿ ಯಾವುದೇ ಶುಭ ಕೆಲಸ ಮಾಡದೆ ಹೋದಲ್ಲಿ ನವೆಂಬರ್ 15 ರಂದು ಅವಶ್ಯಕವಾಗಿ ಈ ಕೆಲಸವನ್ನು ಮಾಡಿ.

ಸಾಧ್ಯವಾದ್ರೆ ಕಾರ್ತಿಕ ಹುಣ್ಣಿಮೆ ದಿನ ಗಂಗಾನದಿಯಲ್ಲಿ ಸ್ನಾನ ಮಾಡಿ. ಇಲ್ಲವಾದ್ರೆ ಸ್ನಾನ ಮಾಡಿ 11 ದೀಪಗಳ ದಾನ ಮಾಡಿ. ಇದನ್ನು ನೀವು ಸಂಜೆ ಮಾಡಬೇಕು. ದೀಪ ದಾನ ಮಾಡಿ ಪೂಜೆ, ಅರ್ಚನೆ ನಂತ್ರ ದೇವಸ್ಥಾನದಿಂದ ಮನೆಗೆ ಬರುವ ನೀವು ತುಳಸಿ ಗಿಡ, ದೇವರ ಮನೆ ಹಾಗೂ ಮುಖ್ಯ ದ್ವಾರದ ಮುಂದೆ ತುಪ್ಪದ ದೀಪ ಹಚ್ಚಿ.

ಕಾರ್ತಿಕ ಹುಣ್ಣಿಮೆಯಂದು ಲಕ್ಷ್ಮಿ ಒಲಿಸಿಕೊಳ್ಳಲು ಈ ಉಪಾಯವನ್ನು ಮಾಡಬಹುದು. ದೇವಸ್ಥಾನಕ್ಕೆ ಹೋಗಿ ನಿಮ್ಮ ನೆಚ್ಚಿನ ದೇವರ ಭಜನೆ ಮಾಡ್ತಾ ದೀಪದ ಆರತಿ ಎತ್ತಿ. ನಂತ್ರ ಒಂದು ದೀಪವನ್ನು ದೇವಸ್ಥಾನದ ಮುಂದಿರುವ ಅಶ್ವತ್ಥಮರದ ಕೆಳಗೆ ಇಡಿ. ನಂತ್ರ ಬಡವರಿಗೆ ಹಣ, ಬಟ್ಟೆ ಸೇರಿದಂತೆ ಅಗತ್ಯ ವಸ್ತುಗಳನ್ನು ದಾನರೂಪದಲ್ಲಿ ನೀಡಿ.

ಮೂರನೇ ಉಪಾಯವನ್ನು ನೀವು ಮನೆಯಲ್ಲಿಯೇ ಮಾಡಬಹುದು. ಮನೆಯಲ್ಲಿ 11 ದೀಪವನ್ನು ಹಚ್ಚಿ. ಮೊದಲ ದೀಪವನ್ನು ತುಳಸಿ ಗಿಡದ ಬಳಿ ಇಡಿ. ಇನ್ನೊಂದು ದೀಪವನ್ನು ಮುಖ್ಯದ್ವಾರದ ಬಳಿ ಇಡಿ. ಉಳಿದ 9 ದೀಪವನ್ನು ದೇವರ ಮನೆಯಲ್ಲಿ ಇಡಿ.ವಿಷ್ಣು ಸಾಲಿಗ್ರಾಂ ಅಥವಾ ಲಕ್ಷ್ಮಿ ಚಾಲೀಸ್ ಓದಿ.

ಆದರೆ ವರ್ಷದ ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಇದೇ ನವೆಂಬರ್ 8ರಂದು ಸಂಭವಿಸಲಿದೆ. ನವೆಂಬರ್ 8ರಂದು ಹುಣ್ಣಿಮೆಯಾಗಿದೆ. ಈ ಬಾರಿ ಚಂದ್ರ ಗ್ರಹಣ ಭಾರತದಲ್ಲೂ ಗೋಚರಿಸಲಿದೆ. ಹಾಗಾಗಿ ಭಾರತದಲ್ಲಿ ಸೂತಕದ ಅವಧಿ ಮಾನ್ಯವಾಗಲಿದೆ. ಪುರಾಣಗಳ ಪ್ರಕಾರ, ಚಂದ್ರಗ್ರಹಣ ರಾಹು ಮತ್ತು ಕೇತುಗಳಿಂದ ಉಂಟಾಗುತ್ತದೆ.

ನವೆಂಬರ್ 8ರಂದು ಸಂಜೆ 5 ಗಂಟೆ 32 ನಿಮಿಷಕ್ಕೆ ಚಂದ್ರಗ್ರಹಣ ಸಂಭವಿಸಲಿದೆ. ಸಂಜೆ 6 ಗಂಟೆ 18 ನಿಮಿಷಕ್ಕೆ ಇದು ಮುಕ್ತಾಯವಾಗಲಿದೆ. ಭಾರತದಲ್ಲಿ ಸೂತಕದ ಅವಧಿ ನವೆಂಬರ್ 8 ರಂದು ಬೆಳಿಗ್ಗೆ 9 ಗಂಟೆ 21 ನಿಮಿಷದಿಂದ ಪ್ರಾರಂಭವಾಗಿ ಸಂಜೆ 6 ಗಂಟೆ 18 ನಿಮಿಷ ಕ್ಕೆ ಕೊನೆಗೊಳ್ಳಲಿದೆ.

ಚಂದ್ರ ಗ್ರಹಣದ ಸಮಯದಲ್ಲಿ ಯಾವುದೇ ದೇವರ ಕೆಲಸವನ್ನು ಮಾಡಬಾರದು. ಪ್ರತಿ ಆಹಾರಕ್ಕೂ ತುಳಸಿ ಎಲೆಯನ್ನು ಹಾಕಬೇಕು. ಗ್ರಹಣದ ಸಮಯದಲ್ಲಿ ಆಹಾರ ಸೇವನೆ ಮಾಡಬಾರದು. ಹಾಗೆಯೇ ನಿದ್ರೆ ಕೂಡ ಮಾಡಬಾರದು. ಗ್ರಹಣ ಮುಗಿದ ಮೇಲೆ ಸ್ನಾನ ಮಾಡಿ ದೇವರ ಪೂಜೆ ಮಾಡಬೇಕೆಂದು ಧರ್ಮ ಗ್ರಂಥಗಳಲ್ಲಿ ಹೇಳಲಾಗಿದೆ

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy a triky na zlepšenie vášho každodenného života, chutné recepty a užitočné články o záhradkárstve. Nájdite nové spôsoby, ako uľahčiť si život a vylepšiť svoje kuchárske schopnosti. Čítajte náš blog pre viac informácií! Sladká paradajková lahôdka Havajská pizza: Osvežujúci čučoriedkový Osviežujúca zeleninová limonáda Paradajkové a jablkové chutney: Pikantná chuť z Rolky so slaninou a rolky so Chutný baklažánový šalát s paradajkami, syrom Temná Kyslá slivková omáčka: chuťová symfónia Steak z morčacích pŕs s rýchloskladovanou Sendvič s 6 Kurací kari v pita Kuracie prsia s paradajkami a fazuľou Naplnené paradajky Krvavý Omáčka, Vegánske Sassi Tagliatelle s rajčinovou omáčkou Horoskop na 14. októbra: Strelec a Hromadné koláče: všetko,