alex Certify ಕಾಲ್ನಡಿಗೆಯಲ್ಲೇ ತೆರಳಿ ರಾಜೀನಾಮೆ ಸಲ್ಲಿಸಲಿರುವ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲ್ನಡಿಗೆಯಲ್ಲೇ ತೆರಳಿ ರಾಜೀನಾಮೆ ಸಲ್ಲಿಸಲಿರುವ ಯಡಿಯೂರಪ್ಪ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೆಲವೇ ಹೊತ್ತಿನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಭಾಷಣ ಮಾಡಿದ‌ ವೇಳೆ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ.

ಭಾಷಣದ ವೇಳೆ ಭಾವುಕರಾಗಿದ್ದ ಯಡಿಯೂರಪ್ಪನವರು ಒಂದು ಹಂತದಲ್ಲಿ ಕಣ್ಣೀರಿಟ್ಟಿದ್ದಾರೆ. ಅಲ್ಲದೇ ತಾವು ರಾಜಕೀಯದಲ್ಲಿ ಈವರೆಗೂ ಸಾಗಿ ಬಂದ ಹಾದಿಯನ್ನು ಸ್ಮರಿಸಿಕೊಂಡಿದ್ದಾರೆ.

ಅದರಲ್ಲಿಯೂ ತಮ್ಮನ್ನು ಏಳು ಬಾರಿ ಶಾಸಕನಾಗಿ ಆಯ್ಕೆ ಮಾಡಿದ ಶಿಕಾರಿಪುರದ ಜನತೆಯನ್ನು ವಿಶೇಷವಾಗಿ ಯಡಿಯೂರಪ್ಪ ಸ್ಮರಿಸಿಕೊಂಡಿದ್ದಾರೆ.

ಇದರ ಮಧ್ಯೆ ಮತ್ತೊಂದು ಸಂಗತಿಯೆಂದರೆ ವಿಧಾನಸೌಧದಿಂದ ಕಾಲ್ನಡಿಗೆಯಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ತಾವರ್‌ ಚಂದ್ ಗೆಹ್ಲೋಟ್‌ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...