alex Certify ‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯ ಸರ್ಕಾರ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಈ ಹಿಂದಿನಂತೆ ಎಲ್ಲಾ ಸೇವೆ ಹಾಗೂ ದರ್ಶನಗಳು ಆರಂಭವಾಗಿವೆ.

ದೇಗುಲದ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ್ದು, ತಾತ್ಕಾಲಿಕವಾಗಿ ರದ್ದು ಗೊಂಡಿದ್ದ ಧಾರ್ಮಿಕ ಸೇವೆಗಳನ್ನು ಈಗ ಪುನರಾರಂಭಿಸಲಾಗಿದೆ. ಭಕ್ತಾದಿಗಳು ಈ ಮೊದಲಿನಂತೆ ಎಲ್ಲಾ ಸೇವಾ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.

ಕಳ್ಳ ಮಾರ್ಗದಲ್ಲಿ ರಾಜ್ಯ ಪ್ರವೇಶಿಸಲು ಯತ್ನಿಸಿದ್ದ ಎರಡು ಬಸ್ ಗಳು ಸೀಜ್….!

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, ಇದರ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಫ್ಯೂ ಹಾಗೂ ಕೆಲ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಅಲ್ಲದೆ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಸೇವಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ನಿರ್ಬಂಧಗಳನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ಹಿಂದಿನಂತೆ ಎಲ್ಲ ಚಟುವಟಿಕೆಗಳು ಆರಂಭವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...