alex Certify ಕುಟುಂಬ ಸಮೇತವಾಗಿ ವಿದೇಶ ಪ್ರವಾಸಕ್ಕೆ ತೆರಳಿದ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬ ಸಮೇತವಾಗಿ ವಿದೇಶ ಪ್ರವಾಸಕ್ಕೆ ತೆರಳಿದ BSY

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತವಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಸೋಮವಾರದಂದು ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಪೂರ್ವನಿಯೋಜಿತ ಕಾರ್ಯಕ್ರಮದಂತೆ ಯಡಿಯೂರಪ್ಪನವರು ಲಂಡನ್ ಗೆ ತೆರಳಿದ್ದಾರೆ.

ಯಡಿಯೂರಪ್ಪನವರಿಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಕುಟುಂಬದ ಇತರೆ ಸದಸ್ಯರು ಸಾಥ್ ನೀಡಿದ್ದು, ಈ ತಿಂಗಳ ಅಂತ್ಯಕ್ಕೆ ಭಾರತಕ್ಕೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪನವರು ತಮ್ಮ ಲಂಡನ್ ಪ್ರವಾಸದ ವೇಳೆ ಥೇಮ್ಸ್ ನದಿ ದಡದಲ್ಲಿ ಸ್ಥಾಪಿಸಲಾಗಿರುವ ಬಸವೇಶ್ವರ ಪ್ರತಿಮೆ ವೀಕ್ಷಿಸಿ ಗೌರವ ಸಲ್ಲಿಸಲಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಯಡಿಯೂರಪ್ಪನವರು ಉತ್ಸುಕರಾಗಿದ್ದು, ಆದರೆ ಬಿಜೆಪಿ ಹೈಕಮಾಂಡ್ ಇದಕ್ಕೆ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...