alex Certify ಕುಡಿದ ಅಮಲಿನಲ್ಲಿ ತಂದೆಯೊಂದಿಗೆ ಸೇರಿ ತಾಯಿಯನ್ನೇ ಕೊಂದ ಮಗ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಅಮಲಿನಲ್ಲಿ ತಂದೆಯೊಂದಿಗೆ ಸೇರಿ ತಾಯಿಯನ್ನೇ ಕೊಂದ ಮಗ…!

ಪಾಪಿ ಪುತ್ರನೊಬ್ಬ ಕುಡಿದ ಅಮಲಿನಲ್ಲಿ ತಂದೆಯೊಂದಿಗೆ ಸೇರಿ ತನ್ನ ತಾಯಿಯನ್ನೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ.

ಮೇಲಿನ ಕೂಜಳ್ಳಿಯ ಬಚ್ಕಂಡದ 64 ವರ್ಷದ ಗೀತಾ ವಿಶ್ವೇಶ್ವರ ಭಟ್ಟ ಕೊಲೆಯಾದ ಮಹಿಳೆಯಾಗಿದ್ದು, ಇವರನ್ನು ಪತಿ ವಿಶ್ವೇಶ್ವರ ನಾರಾಯಣ ಭಟ್ಟ ಹಾಗೂ ಪುತ್ರ ಮಧುಕರ ವಿಶ್ವೇಶ್ವರ ಭಟ್ಟ ಹತ್ಯೆ ಮಾಡಿದ್ದಾರೆ.

ತಂದೆ – ಮಗ ಇಬ್ಬರೂ ಸಹ ವಿಪರೀತ ಮದ್ಯ ವ್ಯಸನಿಗಳಾಗಿದ್ದು, ಮಂಗಳವಾರ ರಾತ್ರಿ ಎಂದಿನಂತೆ ಮದ್ಯ ಸೇವಿಸಿಕೊಂಡು ಬಂದಿದ್ದಾರೆ. ಇದನ್ನು ಪ್ರಶ್ನಿಸಿದ ಗೀತಾ ಅವರ ಮೇಲೆ ಮರದ ಹಲಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೀಗ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...