alex Certify ಕುಡಿಯುವ ನೀರಿನ ಪೈಪ್‌ ಒಡೆದು ‌ʼಕಾರಂಜಿʼ ಯಂತೆ ಚಿಮ್ಮಿದ ನೀರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿಯುವ ನೀರಿನ ಪೈಪ್‌ ಒಡೆದು ‌ʼಕಾರಂಜಿʼ ಯಂತೆ ಚಿಮ್ಮಿದ ನೀರು

ಶಿವಮೊಗ್ಗ ಜಿಲ್ಲೆ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಕುಡಿಯುವ ನೀರು ಪೂರೈಕೆ ಪೈಪ್ ಒಡೆದು, ಅಪಾರ ಪ್ರಮಾಣದ ನೀರು ವ್ಯರ್ಥವಾಗಿದೆ.

ರಸ್ತೆ ದುರಸ್ತಿ ಕಾಮಗಾರಿ ನಡೆಸಲಾಗುತ್ತಿದ್ದು, ಜೆಸಿಬಿ ಚಾಲಕ ಪೈಪ್ ಒಡೆದಿದ್ದಾನೆ. ಇದರಿಂದ ಪೈಪ್ ನಿಂದ ಸುಮಾರು 25 ಅಡಿ ಎತ್ತರದವರೆಗೆ ನೀರು ಕಾರಂಜಿಯಂತೆ ಚಿಮ್ಮುತ್ತಿತ್ತು.

ಸಮೀಪದಲ್ಲೇ ಹಾದು ಹೋಗಿರುವ ವಿದ್ಯುತ್ ಕಂಬದ ತಂತಿಗಳಿಗೂ ನೀರು ತಾಕುತ್ತಿತ್ತು. ತಕ್ಷಣವೇ ಪೈಪ್ ದುರಸ್ತಿಗೊಳಿಸಿ, ನೀರು ಪೋಲಾಗುವುದನ್ನು ತಡೆಯಬೇಕೆಂದು ಆಗ್ರಹಿಸಲಾಗಿದೆ.

ಈ ಮಾರ್ಗದಲ್ಲಿ ಸಂಚರಿಸುವವರು ನೀರು ಮುಗಿಲೆತ್ತರಕ್ಕೆ ಕಾರಂಜಿಯಂತೆ ಚಿಮ್ಮುವುದನ್ನು ಮೊಬೈಲ್ ಗಳಲ್ಲಿ ಸೆರೆ ಹಿಡಿಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...