alex Certify ಕುತ್ತಿಗೆ ಕುಯ್ಯುವುದೇ ಕಾಂಗ್ರೆಸ್ ಕೆಲಸ; ಮತ್ತೆ ಕಿಡಿಕಾರಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತ್ತಿಗೆ ಕುಯ್ಯುವುದೇ ಕಾಂಗ್ರೆಸ್ ಕೆಲಸ; ಮತ್ತೆ ಕಿಡಿಕಾರಿದ ಕುಮಾರಸ್ವಾಮಿ

ರಾಮನಗರ: ಬೆಂಬಲ ಕೊಟ್ಟಂತೆ ನಾಟಕವಾಡಿ ಕುತ್ತಿಗೆ ಕುಯ್ಯುವುದೇ ಕಾಂಗ್ರೆಸ್ ಕೆಲಸ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಹೆಚ್.ಡಿ.ದೇವೇಗೌಡರನ್ನು ಪ್ರಧಾನಿ ಮಾಡಿದ್ದೇ ಕಾಂಗ್ರೆಸ್ ಅಂತಾರೆ, ದೇವೇಗೌಡರು ಕಾಂಗ್ರೆಸ್ ನಿಂದ ಅರ್ಜಿ ಹಿಡಿದುಕೊಂಡು ಹೋಗಿದ್ರಾ? ನಾನು ಸಿಎಂ ಆಗುವಾಗ ನಾನೇನಾದ್ರೂ ಕಾಂಗ್ರೆಸ್ ಬಳಿ ಅರ್ಜಿ ಹಿಡಿದು ಹೋಗಿದ್ನಾ? ನಮ್ಮ ಪಕ್ಷಕ್ಕೆ ಬೆಂಬಲ ಕೊಟ್ಟಂತೆ ಮಾಡಿ ಕುತ್ತಿಗೆ ಕುಯ್ಯುವುದು ಅವರ ಕೆಲಸ. ಈ ಬಗ್ಗೆ ಎರಡು ಮೂರು ಬಾರಿ ಅನುಭವಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

ವೃದ್ಧನ ಮದುವೆಯಾಗಲು ಒಪ್ಪಿ, ತಾಳಿ, ಕಾಲುಂಗರದ ಜೊತೆ ಪರಾರಿಯಾದ ಮಹಿಳೆ

ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಅದು ಅವರ ದೊಡ್ಡತನ. ಬಳಿಕ ನನ್ನ ನಿರ್ಧಾರವನ್ನು ಅವರು ಸ್ವಾಗತಿಸಿ, ಅಭಿನಂದಿಸಿದರು. 2023ಕ್ಕೆ ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಗುರಿ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ನಡೆಯಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...