alex Certify ಕೂಲಿ ಕೆಲಸ ಮಾಡುವ ಹುಡುಗನಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ 2 ನೇ ರ್ಯಾಂಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂಲಿ ಕೆಲಸ ಮಾಡುವ ಹುಡುಗನಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ 2 ನೇ ರ್ಯಾಂಕ್

ಶನಿವಾರದಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಗದಗ ಜಿಲ್ಲೆ ನರೇಗಲ್ ನ ಅನ್ನದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ ದುರ್ಗಪ್ಪ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ ಶಿವರಾಜ ದುರ್ಗಪ್ಪ ತುಮಕೂರು ಜಿಲ್ಲೆಯ ಆದರ್ಶ ನಗರದಲ್ಲಿರುವ ಅಮಾನಿಕೆರೆ ಹತ್ತಿರ ನಡೆದಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದರು.

ಅವರಿಗೆ ಕಾಲೇಜಿನ ಪ್ರಾಂಶುಪಾಲ ವೈ.ಸಿ. ಪಾಟೀಲ ಕರೆಮಾಡಿ ತಿಳಿಸಿದ ಮೇಲೆಯೇ ತಾವು ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿರುವುದು ಗೊತ್ತಾಗಿದೆ. ಆ ಬಳಿಕ ಸ್ಥಳದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದ್ದು, ಜೊತೆಯಲ್ಲಿದ್ದ ಕಾರ್ಮಿಕ ಸ್ನೇಹಿತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...