alex Certify ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪಗೆ ಮತ್ತೆ ಜೈಲೇ ಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪಗೆ ಮತ್ತೆ ಜೈಲೇ ಗತಿ

ಶಿವಮೊಗ್ಗ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಎಸಿಬಿ ದಾಳಿ ವೇಳೆ ಬಂಧನಕ್ಕೀಡಾಗಿದ್ದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರಿಗೆ ಜೈಲುವಾಸವೇ ಗತಿಯಾಗಿದೆ. ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರುದ್ರೇಶಪ್ಪ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಲಾಗಿದೆ. ಸರ್ಕಾರಿ ಅಭಿಯೋಜಕರು ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಶಿವಮೊಗ್ಗ ಒಂದನೇ ಸೆಷನ್ಸ್ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪರವರನ್ನು ಮೊನ್ನೆ ನಡೆದ ಎಸಿಬಿ ದಾಳಿ ವೇಳೆ ಶಿವಮೊಗ್ಗದ ಅವರ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿತ್ತು. ದಾಳಿ ವೇಳೆ ಶಿವಮೊಗ್ಗದ ಮನೆಯಲ್ಲಿ ಅಪಾರಪ್ರಮಾಣದ ನಗದು, ಬಂಗಾರ, ಆಸ್ತಿ, ಪಾಸ್ತಿ ಪತ್ತೆಯಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...