alex Certify ಕೆಂಡ ಹಾಯುವಾಗ ಆಯತಪ್ಪಿ ಬೆಂಕಿಗೆ ಬಿದ್ದು ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಂಡ ಹಾಯುವಾಗ ಆಯತಪ್ಪಿ ಬೆಂಕಿಗೆ ಬಿದ್ದು ಗಂಭೀರ ಗಾಯ

ಕೆಂಡ ಹಾಯುವಾಗ ವ್ಯಕ್ತಿಯೊಬ್ಬ ಬೆಂಕಿಗೆ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ತಂಜಾವೂರು ಜಿಲ್ಲೆಯ ಪಾಂಡನಲ್ಲೂರು ಗ್ರಾಮದಲ್ಲಿ ಉತ್ಸವ ಆಯೋಜಿಸಲಾಗಿತ್ತು. ಇದರ ಅಂಗವಾಗಿ ಕೆಂಡ ಹಾಯುವ ಪದ್ದತಿಯಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ.

ಸಮೀಪದ ಸೆರಕಡಂಬೂರು ಗ್ರಾಮದ 52 ವರ್ಷದ ಭೂಮಿನಾದನ್‌ ಕೆಂಡ ಹಾಯುವಾಗ ಆಯತಪ್ಪಿ ಬೆಂಕಿ ಮೇಲೆ ಬಿದ್ದಿದ್ದಾರೆ. ಇದರಿಂದಾಗಿ ತೀವ್ರ ಸುಟ್ಟ ಗಾಯಗಳಾಗಿರುವ ಅವರನ್ನು ಕುಂಭಕೋಣಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...