alex Certify ಕೆಲವೇ ಗಂಟೆಗಳಲ್ಲಿ ಮುಂಬೈ ತಲುಪಲಿದೆ ಉಕ್ರೇನ್​ನಲ್ಲಿದ್ದ ಭಾರತೀಯರನ್ನು ಹೊತ್ತ ಏರ್​ ಇಂಡಿಯಾ ವಿಮಾನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲವೇ ಗಂಟೆಗಳಲ್ಲಿ ಮುಂಬೈ ತಲುಪಲಿದೆ ಉಕ್ರೇನ್​ನಲ್ಲಿದ್ದ ಭಾರತೀಯರನ್ನು ಹೊತ್ತ ಏರ್​ ಇಂಡಿಯಾ ವಿಮಾನ..!

ಯುದ್ಧ ಪೀಡಿತ ಉಕ್ರೇನ್​ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಲೇ ಇದೆ. ಈ ನಡುವೆ 219 ನಾಗರಿಕರನ್ನು ಹೊತ್ತ ಮೊದಲ ಏರ್ ಇಂಡಿಯಾ ವಿಮಾನವು ರೋಮೇನಿಯಾದಿಂದ ಹೊರಟಿದ್ದು ಸಂಜೆ 6:30ರ ಸುಮಾರಿಗೆ ಮುಂಬೈ ವಿಮಾನ ನಿಲ್ದಾಣವನ್ನು ತಲುಪಲಿದೆ. ರಷ್ಯಾ ಹಾಗೂ ಉಕ್ರೇನ್​ ನಡುವೆ ಪೂರ್ಣ ಪ್ರಮಾಣದಲ್ಲಿ ಮಿಲಿಟರಿ ಕಾರ್ಯಾಚರಣೆ ಆರಂಭಗೊಂಡ ಬಳಿಕ ಉಕ್ರೇನ್​ನಿಂದ ಭಾರತಕ್ಕೆ ಬಂದ ಮೊದಲ ವಿಮಾನ ಇದಾಗಿದೆ.

ವಿಮಾನದ ಒಳಗೆ ಭಾರತೀಯ ನಾಯಕರು ಕುಳಿತುಕೊಂಡಿರುವ ಸಾಕಷ್ಟು ಫೋಟೋ ಹಾಗೂ ವಿಡಿಯೋಗಳು ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದೆ. ಒಂದು ವಿಡಿಯೋದಲ್ಲಿ ರೊಮೇನಿಯಾದಲ್ಲಿರುವ ಭಾರತೀಯ ರಾಯಭಾರಿ ರಾಹುಲ್​ ಶ್ರೀವಾಯ್ಸವ ಉಕ್ರೇನ್​ನಲ್ಲಿ ಒಬ್ಬನೇ ಒಬ್ಬ ಭಾರತೀಯ ಪ್ರಜೆಯನ್ನು ನಾವು ಬಿಟ್ಟರೂ ನಮ್ಮ ಮಿಷನ್​ ಪೂರ್ಣಗೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡುತ್ತಿರುವುದನ್ನು ಕೇಳಬಹುದಾಗಿದೆ.

ಉಕ್ರೇನ್​ನಲ್ಲಿರುವ ಭಾರತೀಯರನ್ನು ಸಂಪರ್ಕಿಸಿ ಅವರನ್ನು ವಾಪಸ್​ ತಾಯ್ನಾಡಿಗೆ ಕರೆತರಲು ಭಾರತವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಜೀವನದಲ್ಲಿ ತುಂಬಾ ಕಷ್ಟ ಬಂದಿದೆ ಎಂದೆನಿಸಿದ ಕ್ಷಣ ಈ ದಿನ ಅಂದರೆ ಫೆಬ್ರವರಿ 26ನ್ನು ನೆನಪಿಸಿಕೊಳ್ಳಿ. ನೆನಪಿಡಿ. ಎಲ್ಲರಿಗೂ ಒಳ್ಳೆಯದೇ ಆಗುತ್ತದೆ ಎಂದು ಹೇಳಿದರು.

— Dr. S. Jaishankar (Modi Ka Parivar) (@DrSJaishankar) February 26, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...