![](https://kannadadunia.com/wp-content/uploads/2022/02/Ukraine-evacuation.jpg)
ವಿಮಾನದ ಒಳಗೆ ಭಾರತೀಯ ನಾಯಕರು ಕುಳಿತುಕೊಂಡಿರುವ ಸಾಕಷ್ಟು ಫೋಟೋ ಹಾಗೂ ವಿಡಿಯೋಗಳು ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಒಂದು ವಿಡಿಯೋದಲ್ಲಿ ರೊಮೇನಿಯಾದಲ್ಲಿರುವ ಭಾರತೀಯ ರಾಯಭಾರಿ ರಾಹುಲ್ ಶ್ರೀವಾಯ್ಸವ ಉಕ್ರೇನ್ನಲ್ಲಿ ಒಬ್ಬನೇ ಒಬ್ಬ ಭಾರತೀಯ ಪ್ರಜೆಯನ್ನು ನಾವು ಬಿಟ್ಟರೂ ನಮ್ಮ ಮಿಷನ್ ಪೂರ್ಣಗೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡುತ್ತಿರುವುದನ್ನು ಕೇಳಬಹುದಾಗಿದೆ.
ಉಕ್ರೇನ್ನಲ್ಲಿರುವ ಭಾರತೀಯರನ್ನು ಸಂಪರ್ಕಿಸಿ ಅವರನ್ನು ವಾಪಸ್ ತಾಯ್ನಾಡಿಗೆ ಕರೆತರಲು ಭಾರತವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಜೀವನದಲ್ಲಿ ತುಂಬಾ ಕಷ್ಟ ಬಂದಿದೆ ಎಂದೆನಿಸಿದ ಕ್ಷಣ ಈ ದಿನ ಅಂದರೆ ಫೆಬ್ರವರಿ 26ನ್ನು ನೆನಪಿಸಿಕೊಳ್ಳಿ. ನೆನಪಿಡಿ. ಎಲ್ಲರಿಗೂ ಒಳ್ಳೆಯದೇ ಆಗುತ್ತದೆ ಎಂದು ಹೇಳಿದರು.