alex Certify ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜೊತೆ ಸೆಲ್ಫಿ ಕಳುಹಿಸಿ ನಗದು ಬಹುಮಾನ ಗೆಲ್ಲಿ..! ಉಡುಪಿ ಬ್ಲಾಕ್ ಕಾಂಗ್ರೆಸ್‌ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜೊತೆ ಸೆಲ್ಫಿ ಕಳುಹಿಸಿ ನಗದು ಬಹುಮಾನ ಗೆಲ್ಲಿ..! ಉಡುಪಿ ಬ್ಲಾಕ್ ಕಾಂಗ್ರೆಸ್‌ ಘೋಷಣೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಇದೀಗ ಉಡುಪಿ ಬ್ಲಾಕ್ ಕಾಂಗ್ರೆಸ್ ಸಿಡಿದೆದ್ದಿದೆ. ಅ. 7 ರಿಂದ 14 ರೊಳಗೆ ಉಡುಪಿ, ಕಾಪು, ಕುಂದಾಪುರ ವ್ಯಾಪ್ತಿಯಲ್ಲಿ ಅವರು ಕಾಣಿಸಿಕೊಂಡರೆ ಸೆಲ್ಫಿ ತೆಗೆದು ಕಳುಹಿಸಿಕೊಡಿ. ವಿಜೇತ 5 ಮಂದಿಗೆ ತಲಾ 5 ಸಾವಿರ ನೀಡುತ್ತೇವೆ ಎಂದು ಘೋಷಿಸಿದೆ.

ಹೌದು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಕಲ್ಮಾಡಿ ಜಂಕ್ಷನ್‌ನಿಂದ ಕರಾವಳಿ ಬೈಪಾಸ್‌ವರೆಗೆ ವಿನೂತನ ಪ್ರತಿಭಟನೆ ನಡೆಸಲಾಯ್ತು. ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ಹದಗೆಟ್ಟಿದ್ದರೂ ಸರಿ ಮಾಡುವ ಗೋಜಿಗೆ ಹೋಗಿಲ್ಲ ಎಂದು ಪ್ರತಿಭಟನೆ ಮಾಡಲಾಯ್ತು.

ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ದಸರಾ ವಿಸರ್ಜನೆ ವೇಳೆ ಶೋಭಕ್ಕ ಕಂಡರೆ ಅವರ ಜೊತೆ ಸೆಲ್ಫಿ ಕಳಿಸಿ. ಒಂದು ವಾರದ ಬಳಿಕವೂ ಅವರು ಕ್ಷೇತ್ರದಲ್ಲಿ ಕಾಣದೆ ಹೋದರೆ ನಾವು ಎಲ್ಲಾ ಠಾಣೆಗಳಲ್ಲಿ ದೂರು ನೀಡ್ತೀವಿ ಅಂತ ಹೇಳಿದ್ದಾರೆ. ಅಷ್ಟೆ ಅಲ್ಲ ನಾಪತ್ತೆಯಾಗಿದ್ದಾರೆ ಹುಡುಕಿ ಕೊಡಿ ಅಂತ ಪೋಸ್ಟರ್ ಅಂಟಿಸುತ್ತೇವೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Forskellen mellem de to katte: Kun et geni kunne svare Tre overraskende produkter Et synstestspil: Kan du finde Opskriftshemmeligheder afsløres: Erstatningsmuligheder for salatprodukter "Kun 1 % af