alex Certify ಕೇಂದ್ರ ಸರ್ಕಾರದಿಂದ ಭಾರತೀಯರಿಗೆ ದ್ರೋಹ; ಟ್ವೀಟ್ ಮೂಲಕ ಕುಟುಕಿದ ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ಭಾರತೀಯರಿಗೆ ದ್ರೋಹ; ಟ್ವೀಟ್ ಮೂಲಕ ಕುಟುಕಿದ ರಾಹುಲ್ ಗಾಂಧಿ

ಲಡಾಕ್ ಗಡಿಯಲ್ಲಿ ಚೀನಾ ಕಟ್ಟಡಗಳ ನಿರ್ಮಾಣ ಹಾಗೂ ಇತರ ಚಟುವಟಿಕೆಗಳನ್ನು ಮಾಡುತ್ತಿರುವುದು ಭವಿಷ್ಯದಲ್ಲಿ ಭಾರತಕ್ಕೆ ಆತಂಕಕಾರಿಯಾಗಿ ಪರಿಣಮಿಸಬಹುದು ಎಂದು ಅಮೆರಿಕ ಸೇನೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದರು.

ಈ ಹೇಳಿಕೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಭಾರತಕ್ಕೆ ಹಾಗೂ ಪ್ರಜೆಗಳಿಗೆ ದ್ರೋಹ ಬಗೆಯುತ್ತಿದೆ ಎಂದು ಹೇಳಿದ್ದಾರೆ.

ಗಡಿಯಲ್ಲಿ ಚೀನಾ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭವಿಷ್ಯದಲ್ಲಿ ಆತಂಕ ಸೃಷ್ಟಿಸಲು ಯತ್ನಿಸುತ್ತಿದೆ‌. ಆದರೆ ಕೇಂದ್ರ ಸರ್ಕಾರ ಮಾತ್ರ ಇದನ್ನು ನಿರ್ಲಕ್ಷಿಸುವ ಮೂಲಕ ದೇಶದ ಜನತೆಗೆ ದ್ರೋಹ ಬಗೆಯುತ್ತಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...