alex Certify ‘ಕೈ’ ಹಿಡಿದ ಶೆಟ್ಟರ್ ಹಣಿಯಲು ಬಿಜೆಪಿ ಪ್ಲಾನ್; ಲಿಂಗಾಯತ ನಾಯಕರ ಜೊತೆ BSY ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೈ’ ಹಿಡಿದ ಶೆಟ್ಟರ್ ಹಣಿಯಲು ಬಿಜೆಪಿ ಪ್ಲಾನ್; ಲಿಂಗಾಯತ ನಾಯಕರ ಜೊತೆ BSY ಸಭೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚುನಾವಣಾ ಕಣಕ್ಕಿಳಿದಿದ್ದಾರೆ. ಅವರನ್ನು ಹೇಗಾದರೂ ಮಾಡಿ ಸೋಲಿಸಲೇಬೇಕೆಂಬ ಜಿದ್ದಿಗೆ ಬಿದ್ದಿರುವ ಬಿಜೆಪಿ ನಾಯಕರು ನಾನಾ ಕಾರ್ಯತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಇದಕ್ಕೆ ಪೂರ್ವಭಾವಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹುಬ್ಬಳ್ಳಿಯಲ್ಲಿ ಬಿಜೆಪಿ ಲಿಂಗಾಯತ ನಾಯಕರ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಶೆಟ್ಟರ್ ಅವರನ್ನು ಬೆಂಬಲಿಸಬೇಡಿ. ಅವರನ್ನು ಸೋಲಿಸುವ ಮೂಲಕ ಪಕ್ಷಾಂತರಿಗಳಿಗೆ ಮಣೆ ಹಾಕುವುದಿಲ್ಲ ಎಂಬ ಸಂದೇಶ ರವಾನಿಸಿ ಎಂದು ಕರೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯುವ ಮೂಲಕ ಪಕ್ಷ ದ್ರೋಹ ಮಾಡಿದ್ದಾರೆ. ಹೀಗಾಗಿ ಎಲ್ಲರೂ ಒಟ್ಟಾಗಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಕೆಲಸ ಮಾಡಿ ಎಂದು ಹೇಳಿದ ಯಡಿಯೂರಪ್ಪನವರು, ಈ ಮೂಲಕ ಶೆಟ್ಟರ್ ಅವರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...