alex Certify ಕೊರೊನಾದಿಂದ ಗುಣಮುಖರಾದ ಉದ್ಯಮಿಯಿಂದ ಹರಕೆ ರೂಪದಲ್ಲಿ ಅಯ್ಯಪ್ಪ ಸ್ವಾಮಿಗೆ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾದಿಂದ ಗುಣಮುಖರಾದ ಉದ್ಯಮಿಯಿಂದ ಹರಕೆ ರೂಪದಲ್ಲಿ ಅಯ್ಯಪ್ಪ ಸ್ವಾಮಿಗೆ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ

ಕೊರೊನಾದಿಂದ ತೀವ್ರ ಅನಾರೋಗ್ಯಕ್ಕೊಳಗಾಗಿ ಸಾವು – ಬದುಕಿನ ನಡುವೆ ಹೋರಾಟ ನಡೆಸಿ ಬಳಿಕ ಗುಣಮುಖರಾದ ಉದ್ಯಮಿಯೊಬ್ಬರು ಆ ಸಂದರ್ಭದಲ್ಲಿ ಕುಟುಂಬಸ್ಥರು ಹೊತ್ತಿದ್ದ ಹರಕೆಯಂತೆ ಶಬರಿಮಲೆ ಅಯ್ಯಪ್ಪಸ್ವಾಮಿಗೆ 50 ಲಕ್ಷ ರೂ. ಮೌಲ್ಯದ ರತ್ನ ಹಾಗೂ ವಜ್ರಖಚಿತ ಚಿನ್ನದ ಕಿರೀಟವನ್ನು ಅರ್ಪಿಸಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉದ್ಯಮಿ ಮಾರಂ ವೆಂಕಟಸುಬ್ಬಯ್ಯ, ಅಯ್ಯಪ್ಪ ಸ್ವಾಮಿಗೆ ವಜ್ರ ಖಚಿತ ಚಿನ್ನದ ಕಿರೀಟ ಅರ್ಪಿಸಿದ ಉದ್ಯಮಿಯಾಗಿದ್ದು, ಇವರು ಕಳೆದ ಮೂವತ್ತು ವರ್ಷಗಳಿಂದಲೂ ಸ್ವಾಮಿಯ ದರ್ಶನ ಪಡೆಯುತ್ತಿದ್ದರು.

ಆದರೆ ಕಳೆದ ಬಾರಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯ ಐಸಿಯುನಲ್ಲಿ ಜೀವನ್ಮರಣದ ಹೋರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಅಯ್ಯಪ್ಪಸ್ವಾಮಿ ತಮ್ಮನ್ನು ಈ ರೋಗದಿಂದ ಮುಕ್ತಗೊಳಿಸುವ ದೃಢ ವಿಶ್ವಾಸ ಮಾರಂ ವೆಂಕಟಸುಬ್ಬಯ್ಯ ಅವರಿಗಿದ್ದು, ದೀರ್ಘಕಾಲದ ಚಿಕಿತ್ಸೆ ಬಳಿಕ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ ತಾವು ಹೊತ್ತಿದ್ದ ಹರಕೆಯಂತೆ ಅಯ್ಯಪ್ಪ ಸ್ವಾಮಿಗೆ 50 ಲಕ್ಷ ರೂ. ಮೌಲ್ಯದ ವಜ್ರ ಖಚಿತ ಚಿನ್ನದ ಕಿರೀಟವನ್ನು ಸಮರ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...