
ಕೊರೊನಾ ವೈರಸ್ ಸಾಕಷ್ಟು ಅವಾಂತರ ಸೃಷ್ಟಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಮೂರನೇ ಅಲೆ ಅಬ್ಬರಿಸುತ್ತಿದೆ. ಮೂರನೇ ಅಲೆ ಎಂದು ಮುಗಿಯಲಿದೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ. ಐಐಟಿ ಕಾನ್ಪುರದ ಪ್ರೊಫೆಸರ್ ಮನೀಂದ್ರ ಅಗರ್ವಾಲ್ ಕೊರೊನಾ ಬಗ್ಗೆ ಮಾಹಿತಿ ನೀಡಿದ್ದಾರೆ. ಕೊರೊನಾ ಇನ್ನೂ ಒಂದು ತಿಂಗಳು ವಿನಾಶವನ್ನುಂಟುಮಾಡುತ್ತದೆ ಎಂದವರು ಹೇಳಿದ್ದಾರೆ. ಜನವರಿ ಕೊನೆಯ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ ತಲುಪಲಿದೆ. ಅದರ ನಂತರ ಫೆಬ್ರವರಿ 15 ರಿಂದ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದಿದ್ದಾರೆ.
ಮುಂದಿನ ವಾರದಿಂದ ಮುಂಬೈ ಮತ್ತು ದೆಹಲಿಯಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಕೊರೊನಾ ಮೂರನೇ ಅಲೆಯ ಉತ್ತುಂಗವು ಎಷ್ಟು ವೇಗವಾಗಿ ಬರುತ್ತಿದೆಯೋ ಅಷ್ಟೇ ವೇಗದಲ್ಲಿ ಪ್ರಕರಣಗಳು ಕಡಿಮೆಯಾಗಲು ಪ್ರಾರಂಭಿಸುತ್ತವೆ ಎಂದಿದ್ದಾರೆ.
ಮಾರ್ಚ್ ವೇಳೆಗೆ ಕೊರೊನಾ ವೈರಸ್ ಮೂರನೇ ತರಂಗವು ಸಂಪೂರ್ಣವಾಗಿ ಕೊನೆಯಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಅನಿವಾರ್ಯವಾಗಿದೆ. ಜನರು ಕೊರೊನಾದಿಂದ ದೂರವಿರಬೇಕೆಂದ್ರೆ ಮಾಸ್ಕ್ ಧರಿಸುವುದನ್ನು ಬಿಡಬಾರದು. ಸ್ಯಾನಿಟೈಜರ್ ಬಳಕೆ ಜೊತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ಅವರು ಹೇಳಿದ್ದಾರೆ.