alex Certify ಕೋಲಾರಕ್ಕೆ ಸಿದ್ದರಾಮಯ್ಯನವರೇ ಅಭ್ಯರ್ಥಿಯಾಗಬೇಕು; ಕೋಲಾರ ಅಭ್ಯರ್ಥಿ ಮಂಜುನಾಥ್ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರಕ್ಕೆ ಸಿದ್ದರಾಮಯ್ಯನವರೇ ಅಭ್ಯರ್ಥಿಯಾಗಬೇಕು; ಕೋಲಾರ ಅಭ್ಯರ್ಥಿ ಮಂಜುನಾಥ್ ಒತ್ತಾಯ

ಕೋಲಾರ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ಕೈತಪ್ಪಿದೆ. ಈ ಬಗ್ಗೆ ಕೋಲಾರ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಸ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಹಾಗೂ ವರುಣ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎಂದು ಹೇಳಲಾಗಿತ್ತು. ಆದರೆ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಿಂದ ಮಾತ್ರ ಟಿಕೆಟ್ ಘೋಷಣೆಯಾಗಿದ್ದು, ಕೋಲಾರದಿಂದ ಕೊತ್ತೂರು ಮಂಜುನಾಥ್ ಅವರನ್ನು ಕಣಕ್ಕಿಳಿಸಲಾಗಿದೆ. ಈ ಬಗ್ಗೆ ಸ್ವತಃ ಕೊತ್ತೂರು ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋಲಾರದಿಂದ ಸಿದ್ದರಾಮಯ್ಯನವರೇ ಅಭ್ಯರ್ಥಿಯಾಗಬೇಕು. ಹೈಕಮಾಂಡ್ ನನಗೆ ಮಾಹಿತಿ ನೀಡದೇ ಟಿಕೆಟ್ ಘೋಷಣೆ ಮಾಡಿದೆ. ಕೋಲಾರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ಘೋಷಣೆಯಾಗುತ್ತೆ ಎಂದು ಹೆಳಲಾಗುತ್ತಿತ್ತು. ಹಾಗಾಗಿ ಸಿದ್ದರಾಮಯ್ಯ ನಮ್ಮ ನಾಯಕರು. ಅವರಿಗೆ ಟಿಕೆಟ್ ಸಿಗಲಿ ಎಂದು ಸುಮ್ಮನಿದ್ದೆವು. ಈಗ ಏಕಾಏಕಿ ಹೈಕಮಾಂಡ್ ನನಗೆ ಟಿಕೆಟ್ ಘೊಷಣೆ ಮಾಡಿದೆ. ಈ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ಒಂದು ರೀತಿಯಲ್ಲಿ ಟಿಕೆಟ್ ಸಿಕ್ಕಿದ್ದು ಸಂತೋಷದ ವಿಚಾರ. ಆದರೆ ಸಿದ್ದರಾಮಯ್ಯನವರೇ ಕೋಲಾರದಿಂದ ಸ್ಪರ್ಧಿಸಬೇಕು ಎಂಬುದು ಹಲವರ ಅಭಿಪ್ರಾಯ. ಕ್ಷೇತ್ರದ ಜನರ ಅಭಿಪ್ರಾಯವೂ ಇದೆ. ಹಾಗಾಗಿ ಸಿದ್ದರಾಮಯ್ಯನವರಿಗೆ ಟಿಕೆಟ್ ಘೋಷಣೆ ಮಾಡಲಿ ಎಂದರು.

ಸಿದ್ದರಾಮಯ್ಯಗೆ ಟಿಕೆಟ್ ಸಿಗದ ಕಾರಣ ಹಲವು ನಾಯಕರು ಅಸಮಾಧಾನಗೊಂಡಿದ್ದಾರೆ. ಸಿದ್ದರಾಮಯ್ಯ ಅವರನ್ನೇ ಅಭ್ಯರ್ಥಿ ಮಾಡಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...