alex Certify ಕೋಲಾರದಿಂದ ಸ್ಪರ್ಧೆ ಬೇಡ ಎಂದ ಹೈಕಮಾಂಡ್ ಸಿದ್ದರಾಮಯ್ಯಗೆ ಹೇಳಿದ್ದೇನು ? ಇಲ್ಲಿದೆ ಅವರೇ ನೀಡಿರುವ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರದಿಂದ ಸ್ಪರ್ಧೆ ಬೇಡ ಎಂದ ಹೈಕಮಾಂಡ್ ಸಿದ್ದರಾಮಯ್ಯಗೆ ಹೇಳಿದ್ದೇನು ? ಇಲ್ಲಿದೆ ಅವರೇ ನೀಡಿರುವ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆಯಂತೆ ಈಗ ತಮ್ಮ ನಿರ್ಧಾರ ಬದಲಾಯಿಸಿದ್ದು, ಬಹುತೇಕ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.

ಇದರ ಮಧ್ಯೆ ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ಕೋಲಾರದಿಂದ ಆಗಮಿಸಿರುವ ಸಾವಿರಾರು ಅಭಿಮಾನಿಗಳು, ಕೋಲಾರದಿಂದಲೇ ನೀವು ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೆ ಒಂದೊಮ್ಮೆ ಇದಕ್ಕೆ ಒಪ್ಪದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಕೆಲವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನೀವು ಕೋಲಾರದಲ್ಲಿ ಸ್ಪರ್ಧಿಸಿದರೆ ನಿಮ್ಮ ಗಮನ ಅಲ್ಲಿಯೇ ಕೇಂದ್ರೀಕರಿಸುವಂತೆ ಮಾಡಲು ವಿಪಕ್ಷಗಳ ನಾಯಕರು ತಂತ್ರ ರೂಪಿಸಿದ್ದಾರೆ. ಅಂತಹ ಸಂದರ್ಭದಲ್ಲಿ ನೀವು ರಾಜ್ಯ ಪ್ರವಾಸ ಮಾಡುವುದು ಕಷ್ಟ. ಹೀಗಾಗಿ ರಿಸ್ಕ್ ತೆಗೆದುಕೊಳ್ಳದೆ ಬೇರೆ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಹೈಕಮಾಂಡ್ ತಿಳಿಸಿದೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...