alex Certify ‘ಕೋವಿಡ್​ ಪರೀಕ್ಷೆ ಹೆಚ್ಚಿಸಿ, ಆಸ್ಪತ್ರೆಗಳನ್ನು ಬಲಪಡಿಸಿ’ -ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೋವಿಡ್​ ಪರೀಕ್ಷೆ ಹೆಚ್ಚಿಸಿ, ಆಸ್ಪತ್ರೆಗಳನ್ನು ಬಲಪಡಿಸಿ’ -ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದ ಸಲಹೆ

ದೇಶದಲ್ಲಿ ಕೋವಿಡ್​ 19 ಪ್ರಕರಣಗಳು ದಿಢೀರ್​ ಏರಿಕೆ ಕಾಣುತ್ತಿರೋದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್​ ಭೂಷಣ್​, ದೆಹಲಿ, ಕರ್ನಾಟಕ, ತಮಿಳುನಾಡು, ಹರಿಯಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್​ ಹಾಗೂ ಜಾರ್ಖಂಡ್​ ರಾಜ್ಯಗಳಿಗೆ ಪತ್ರ ಬರೆದಿದ್ದು, ಕೋವಿಡ್​ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಕರ್ಯಗಳನ್ನು ಇನ್ನಷ್ಟು ಬಲಪಡಿಸುವಂತೆ ಸಲಹೆ ನೀಡಿದ್ದಾರೆ.

14 ನಗರಗಳಲ್ಲಿ ಕೋವಿಡ್​ ಪ್ರಕರಣಗಳಲ್ಲಿ ಹಠಾತ್​ ಏರಿಕೆಯನ್ನು ಗುರುತಿಸಿರುವ ಕೇಂದ್ರ ಸರ್ಕಾರವು ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ರಾಜ್ಯಗಳನ್ನು ಒತ್ತಾಯಿಸಿದೆ. ದೆಹಲಿ ಹಾಗೂ ಮಹಾರಾಷ್ಟ್ರವು ಓಮಿಕ್ರಾನ್​​ ಪ್ರಕರಣಗಳನ್ನು ಹೆಚ್ಚಾಗಿ ವರದಿ ಮಾಡುತ್ತಿರುವ ರಾಜ್ಯಗಳಾಗಿವೆ.

ಇಲ್ಲಿ ಓಮಿಕ್ರಾನ್​ ರೂಪಾಂತರಿಯು ಹೆಚ್ಚಾಗಿ ಕಾಣಿಸಿಕೊಂಡಿದೆ. ಇನ್ನು ನಗರಗಳ ಪೈಕಿ ಬೆಂಗಳೂರು ಹಾಗೂ ಅಹಮದಾಬಾದ್​​ನಲ್ಲಿ ಓಮಿಕ್ರಾನ್​ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ಹೇಳಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 115 ಕೋವಿಡ್​ ಪ್ರಕರಣಗಳ ಪೈಕಿ 46 ಪ್ರತಿಶತ ಪ್ರಕರಣಗಳು ಓಮಿಕ್ರಾನ್ ರೂಪಾಂತರಿಯನ್ನು ಹೊಂದಿದೆ. ವೇಗವಾಗಿ ಹರಡಬಲ್ಲ ಓಮಿಕ್ರಾನ್​ ರೂಪಾಂತರಿಯು ಕಮ್ಯೂನಿಟಿ ಸ್ಪ್ರೆಡ್​ ಆಗುತ್ತಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಆತಂಕ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...