alex Certify ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಉತ್ತಮ ಕೆಲಸ; ಕಾರ್ಯಕರ್ತರಿಗೆ ಶಹಬಾಸ್ ಗಿರಿ ನೀಡಿದ ಅರುಣ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಉತ್ತಮ ಕೆಲಸ; ಕಾರ್ಯಕರ್ತರಿಗೆ ಶಹಬಾಸ್ ಗಿರಿ ನೀಡಿದ ಅರುಣ್ ಸಿಂಗ್

ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಜೀವದ ಹಂಗು ತೊರೆದು ಜನರಿಗೆ ನೆರವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸಿರುವ ಅರುಣ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಸಮಯವೇ ಸಂಘಟನೆ ಎಂಬ ಧೇಯವನ್ನು ಪಾಲಿಸಿದ್ದಾರೆ ಎಂದರು.

ಎಲ್.ಪಿ.ಜಿ. ಸಿಲಿಂಡರ್ ಬುಕ್ ಮಾಡುವುದು ಇನ್ಮುಂದೆ ಮತ್ತಷ್ಟು ಸುಲಭ

ಇದೇ ವೇಳೆ ವಿಪಕ್ಷಗಳ ವಿರುದ್ಧ ಗುಡುಗಿದ ಅರುಣ್ ಸಿಂಗ್, ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಕೇವಲ ಆರೋಪ ಮಾಡುವುದರಲ್ಲಿ ಕಾಲ ಕಳೆದಿದ್ದರೆ, ಜೆಡಿಎಸ್ ನವರು ಕ್ವಾರಂಟೈನ್ ಆಗಿದ್ದಾರೆ. ವಿರೋಧ ಪಕ್ಷದವರು ಯಾರೊಬ್ಬರೂ ಜನರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಮೂರು ದಿನಗಳ ಕಾಲ ಸಭೆ ನಡೆಸುವುದಾಗಷ್ಟೇ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...