alex Certify ಕೌಟುಂಬಿಕ‌ ಕಲಹಕ್ಕೆ ಬೇಸತ್ತು ಗುಂಡು ಹಾರಿಸಿಕೊಂಡ ಮಹಿಳಾ ಪೇದೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೌಟುಂಬಿಕ‌ ಕಲಹಕ್ಕೆ ಬೇಸತ್ತು ಗುಂಡು ಹಾರಿಸಿಕೊಂಡ ಮಹಿಳಾ ಪೇದೆ….!

ಮಂಗಳೂರು- ಕೌಟುಂಬಿಕ ಕಲಹದಿಂದ ಬೇಸತ್ತ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಈ ಘಟನೆ ನಡೆದಿದ್ದು, ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

33 ವರ್ಷದ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌ ಆತ್ಮಹತ್ಯೆಗೆ ಯತ್ನಿಸಿದ ಪೇದೆ ಎಂದು ಹೇಳಲಾಗಿದೆ. ಇವರು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದರು ಎನ್ನಲಾಗಿದೆ. ಕರ್ತವ್ಯನಿರತರಾಗಿದ್ದಾಗಲೇ ಹೀಗೆ ಮಾಡಿಕೊಂಡಿದ್ದಾರೆ.

ಇನ್ನು ಈ ಪೇದೆಯ ಗಂಡ ಓಂಬೀರ್ ಸಿಂಗ್ ಎಂ ಆರ್‌ ಪಿ ಎಲ್‌ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನು ಈ ಘಟನೆಗೆ ಕೌಟುಂಬಿಕ ಕಲಹ ಕಾರಣವಂತೆ. ಜ್ಯೋತಿ ಭಾಯಿ 2010ನೇ ಬ್ಯಾಚ್‌ ನವರಂತೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...