alex Certify ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವ ಜನತೆಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವ ಜನತೆಗೆ ‘ಗುಡ್ ನ್ಯೂಸ್’

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮಾಂತರ ಪ್ರದೇಶದ ಯುವಜನತೆಗೆ ಕ್ರೀಡಾ ಸಚಿವ ನಾರಾಯಣಗೌಡ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಆಟದ ಮೈದಾನ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಆಟದ ಮೈದಾನ ನಿರ್ಮಾಣಕ್ಕಾಗಿ 504 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಎರಡು ಯುವ ಸಬಲೀಕರಣ ಸಂಸ್ಥೆ ಸ್ಥಾಪನೆಗೆ ಸರ್ಕಾರ ಯೋಜನೆ ರೂಪಿಸಿದ್ದು, ಪ್ರತಿಯೊಂದು ಸಂಸ್ಥೆಗೂ 5 ಲಕ್ಷ ರೂಪಾಯಿಗಳ ಅನುದಾನ ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...