alex Certify ಕ್ಲೀನ್ ಚಿಟ್ ಬಳಿಕ ಜಾರಕಿಹೊಳಿ ಮಂತ್ರಿಯಾಗ್ತಾರೆ; ರಮೇಶ್ ಜಾರಕಿಹೊಳಿ ಪರ ಸಚಿವರ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಲೀನ್ ಚಿಟ್ ಬಳಿಕ ಜಾರಕಿಹೊಳಿ ಮಂತ್ರಿಯಾಗ್ತಾರೆ; ರಮೇಶ್ ಜಾರಕಿಹೊಳಿ ಪರ ಸಚಿವರ ಬ್ಯಾಟಿಂಗ್

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಶಾಸಕ ರಮೇಶ್ ಜಾರಕಿಹೊಳಿ ಹೊಸ ರೀತಿ ತಂತ್ರಾಗಾರಿಕೆ ಹೆಣೆಯುತ್ತಿದ್ದು, ಮುಂಬೈನಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗುವುದರ ಜೊತೆಗೆ ಸುತ್ತೂರು ಶ್ರೀಗಳನ್ನು ಭೇಟಿಯಾಗುವ ಮೂಲಕ ಒತ್ತಡ ಹೇರಲು ಮುಂದಾಗಿದ್ದಾರೆ. ಈ ನಡುವೆ ರಮೇಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿರುವ ಸಚಿವ ಭೈರತಿ ಬಸವರಾಜ್ ಹಾಗೂ ಎಂಟಿಬಿ ನಾಗರಾಜ್, ಕ್ಲೀನ್ ಚಿಟ್ ಬಳಿಕ ಜಾರಕಿಹೊಳಿ ಮಂತ್ರಿಯಾಗುವುದು ಖಚಿತ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ್, ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಯಿದ್ದೇವೆ. ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಚಿವರಾಗಲಿದ್ದಾರೆ ಎಂದರು.

ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​ ಅಧಿಕೃತ ಖಾತೆ ಲಾಕ್​ ಮಾಡಿದ್ದ ಟ್ವಿಟರ್..!

ಇದೇ ವೇಳೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್, ನಾವು 17 ಜನರು ಒಗ್ಗಟ್ಟಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನಗಳೂ ಇಲ್ಲ. ರಮೇಶ್ ಜಾರಕಿಹೊಳಿ ಶೀಘ್ರದಲ್ಲೇ ಮತ್ತೆ ಮಂತ್ರಿಯಾಗಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...