alex Certify ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ..!

ದೆಹಲಿ: ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ಯುವಕರ ಮೇಲೆ ದಾಳಿ ಮಾಡಲಾಗಿದ್ದು, ಅದರಲ್ಲಿ ಒಬ್ಬ ಮೃತಪಟ್ಟಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚೂರಿ ಇರಿತಕ್ಕೊಳಗಾಗಿ ಒದ್ದಾಡುತ್ತಿದ್ದ ಯುವಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಈ ವೇಳೆ ಒಬ್ಬಾತ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐಎಎಸ್ ಆಕಾಂಕ್ಷಿಯಾಗಿದ್ದ ಅಮರ್ದೀಪ್ ಪಾಸ್ವಾನ್ ಮೃತ ದುರ್ದೈವಿ. ಹಾಗೂ ಆತನ ಸ್ನೇಹಿತನನ್ನು ಸಾಗರ್ ಕುಮಾರ್ (20) ಎಂದು ಗುರುತಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌನಕ್ ಕುಮಾರ್ (19), ರೋಹಿತ್ ಕುಮಾರ್ (22) ಮತ್ತು ಮುಖೇಶ್ ಕುಮಾರ್ (22) ಬಂಧಿತ ಆರೋಪಿಗಳು.

ಅಮರದೀಪ್ ಐಎಎಸ್ ಆಕಾಂಕ್ಷಿಯಾಗಿದ್ದು, ಶಾಲಾ ಮಕ್ಕಳಿಗೆ ಟ್ಯೂಷನ್ ತರಗತಿಗಳನ್ನು ನೀಡುತ್ತಿದ್ದರು. ಅಮರದೀಪ ಮತ್ತು ಸ್ನೇಹಿತ ಸಾಗರ್ ಇಬ್ಬರೂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮೂವರು ಅಪರಿಚಿತ ವ್ಯಕ್ತಿಗಳು ಇವರೊಂದಿಗೆ ವಾಗ್ವಾದ ನಡೆಸಿದ್ದಾರೆ. ವಾಗ್ವಾದ ಜೋರಾಗುತ್ತಿದ್ದಂತೆ, ಆರೋಪಿಗಳು ಇಬ್ಬರಿಗೂ ಹರಿತವಾದ ಆಯುಧಗಳಿಂದ ಇರಿದು ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಗಾಯಗೊಂಡಿರುವ ಸಾಗರ್ ಹೇಳಿಕೆಯನ್ನು ಪೊಲೀಸರು ಪಡೆದಿದ್ದು, ಮೂವರು ಆರೋಪಿಗಳ ವಿರುದ್ಧ ಕೊಲೆ ಹಾಗೂ ಕೊಲೆ ಯತ್ನದ ಎಫ್‌ಐಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...