alex Certify ಕ್ಷುಲ್ಲಕ ಕಾರಣಕ್ಕೆ ಬೀದಿಬದಿ ವ್ಯಾಪಾರಿಗೆ ಇನ್ನಿಲ್ಲದ ಕಷ್ಟ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ಬೀದಿಬದಿ ವ್ಯಾಪಾರಿಗೆ ಇನ್ನಿಲ್ಲದ ಕಷ್ಟ ನೀಡಿದ ಮಹಿಳೆ

ಆಕ್ರೋಶಗೊಂಡಿದ್ದ ಮಹಿಳೆಯೊಬ್ಬರು ಬೀದಿ ಬದಿ ವ್ಯಾಪಾರಿಯ ತಳ್ಳುವ ಗಾಡಿಯಲ್ಲಿದ್ದ ಹಣ್ಣುಗಳನ್ನು ರಸ್ತೆಗೆ ಎಸೆದಿದ್ದು ಈ ಅಮಾನವೀಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗ್ತಿದೆ. ಈ ವಿಡಿಯೋ ಬಗ್ಗೆ ನೆಟ್ಟಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭೋಪಾಲ್​ನ ಜಿಲ್ಲಾಡಳಿತ ಘಟನೆ ಸಂಬಂಧ ತನಿಖೆಗೆ ಮುಂದಾಗಿದೆ.‌

ವಿಡಿಯೋದಲ್ಲಿ ಕೋಪಗೊಂಡಿರುವ ಮಹಿಳೆಯು ವ್ಯಾಪಾರಿಗೆ ಬಯ್ಯುತ್ತಿದ್ದಾರೆ ಹಾಗೂ ತನ್ನ ಕಾರಿನತ್ತ ಕೈ ಮಾಡುತ್ತಾ ಆತನ ಗಾಡಿಯಲ್ಲಿದ್ದ ಹಣ್ಣುಗಳನ್ನು ಒಂದೊಂದಾಗಿಯೇ ರಸ್ತೆಗೆ ಎಸೆದಿದ್ದಾರೆ. ಈ ವೇಳೆಯಲ್ಲಿ ವ್ಯಾಪಾರಿಯು ಮೇಡಂ ದಯವಿಟ್ಟು ಈ ರೀತಿ ಮಾಡಬೇಡಿ. ನಾನು ಬಡವ ಎಂದು ಹೇಳುತ್ತಿರೋದನ್ನು ಕೇಳಬಹುದಾಗಿದೆ. ನಿಮ್ಮ ಕಾರಿಗೆ ಆದ ಹಾನಿಯನ್ನು ನಾನು ತುಂಬಿಕೊಡುತ್ತೇನೆ ಎಂದು ವ್ಯಾಪಾರಿಯು ಪರಿ ಪರಿಯಾಗಿ ಬೇಡಿಕೊಂಡರೂ ಸಹ ಕೇಳದ ಮಹಿಳೆಯು ಈ ರೀತಿ ರಾದ್ಧಾಂತ ಮಾಡಿದ್ದಾರೆ.

ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು ಮಹಿಳೆಯ ವರ್ತನೆಯ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ದುರ್ವರ್ತನೆ ತೋರಿದ ಮಹಿಳೆಯನ್ನು ಪೊಲೀಸರು ಬಂಧಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಮಾತನಾಡಿದ ಭೋಪಾಲ್​ ಜಿಲ್ಲಾಧಿಕಾರಿ ಅವಿನಾಶ್​ ಲಾವಣಿಯಾ ಈ ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ಭೋಪಾಲ್​ನ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಮಹಿಳೆಯು ವ್ಯಾಪಾರಿಯ ಗಾಡಿಯಲ್ಲಿದ್ದ ಹಣ್ಣುಗಳನ್ನು ಎಸೆಯುತ್ತಿದ್ದಾಳೆ. ಮಹಿಳೆಯನ್ನು ಗುರುತಿಸಿ ಆಕೆಯ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎಂದು ಅವಿನಾಶ್​ ಟ್ವೀಟಾಯಿಸಿದ್ದಾರೆ.

— Mario David Antony Alapatt (@davidalapatt) January 11, 2022

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...