alex Certify ಕ್ಷುಲ್ಲಕ ವಿಚಾರಕ್ಕೆ ಜಗಳ: ಬಾಲಕನನ್ನು ಹೊಡೆದು ಕೊಂದ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ವಿಚಾರಕ್ಕೆ ಜಗಳ: ಬಾಲಕನನ್ನು ಹೊಡೆದು ಕೊಂದ ವಿದ್ಯಾರ್ಥಿಗಳು

ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ಪರಿಣಾಮ ನಾಲ್ವರು ಹುಡುಗರು ಹದಿನಾರು ವರ್ಷದ ಬಾಲಕನನ್ನು ಹೊಡೆದು ಕೊಲೆ ಮಾಡಿದ ಘಟನೆಯು ರಾಯ್ಪುರದ ಶಾಲೆಯೊಂದರಲ್ಲಿ ಸಂಭವಿಸಿದೆ.

ಛತ್ತೀಸಗಢದ ರಾಜಧಾನಿ ಭಾನ್​ಪುರಿ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಮೋಹನ್​ ಸಿಂಗ್​ ರಜಪೂತ್​ 10ನೇ ತರಗತಿ ಪರೀಕ್ಷೆಗೆ ಹಾಜರಾಗಲು ಶಾಲೆಗೆ ಆಗಮಿಸಿದ್ದ. ವಿದ್ಯಾರ್ಥಿಗಳ ಅಂಕವನ್ನು ಸುಧಾರಿಸಲು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ವೇಳೆ ಈತ 11ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದ ಎಂದು ಖಮ್ತರೈ ಪೊಲೀಸ್​ ಠಾಣೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಗಳವು ವಿಕೋಪಕ್ಕೆ ತಿರುಗಿ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ರಜಪೂತ್​​ಗೆ ತೀವ್ರವಾಗಿ ಥಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ರಜಪೂತ್​​ನನ್ನು ಡಾ. ಬಿ.ಆರ್.​ ಅಂಬೇಡ್ಕರ್​ ಸ್ಮಾರಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...