alex Certify ಖಾಲಿ ಕುರ್ಚಿಗೆ ಶಾಲು ಹೊದಿಸಿ ಸನ್ಮಾನ; ಪುರಸಭಾ ಸದಸ್ಯನ ವಿನೂತನ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಲಿ ಕುರ್ಚಿಗೆ ಶಾಲು ಹೊದಿಸಿ ಸನ್ಮಾನ; ಪುರಸಭಾ ಸದಸ್ಯನ ವಿನೂತನ ಪ್ರತಿಭಟನೆ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡಲು ವಿಳಂಬ ಮಾಡುವುದು ಹೊಸ ಸಂಗತಿ ಏನಲ್ಲ. ಈ ಕುರಿತು ಎಷ್ಟೇ ಆದೇಶಗಳನ್ನು ಸರ್ಕಾರ ಜಾರಿಗೊಳಿಸಿದರೂ ಬಹಳಷ್ಟು ಅಧಿಕಾರಿಗಳು ಅದನ್ನು ನಿರ್ಲಕ್ಷಿಸಿದ್ದಾರೆ.

ಇದರ ಮಧ್ಯೆ ತಾಲೂಕು ಕಚೇರಿ ಹಾಗೂ ಪುರಸಭೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯ ಮಾಡಿಕೊಡಲು ನಿರ್ಲಕ್ಷ್ಯ ಧೋರಣೆ ಹೊಂದಿರುವ ಅಧಿಕಾರಿಗಳ ನಡೆ ಖಂಡಿಸಿ ಪುರಸಭಾ ಸದಸ್ಯರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ಈ ಘಟನೆ ನಡೆದಿದ್ದು ಪುರಸಭಾ ಸದಸ್ಯ ಪ್ರಸನ್ನ ಕುಮಾರ್, ತಾಲೂಕು ಕಚೇರಿ ಎದುರು ಖಾಲಿ ಕುರ್ಚಿಗೆ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...