alex Certify ‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ‘ಪುನೀತಪರ್ವ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ‘ಪುನೀತಪರ್ವ’

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಖ್ಯಾತ ನಟ ದಿ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ಪ್ರಿ ರಿಲೀಸ್ ಇವೆಂಟ್ ‘ಪುನೀತ ಪರ್ವ’ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಸೇರಿದಂತೆ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಸಂಪೂರ್ಣ ಕನ್ನಡ ಚಿತ್ರರಂಗವೇ ತಮ್ಮ ಮನೆಯ ಕಾರ್ಯಕ್ರಮದ ರೀತಿಯಲ್ಲಿ ಈ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದು, ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟ – ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅರಮನೆ ಮೈದಾನ ‘ಕೃಷ್ಣ ವಿಹಾರ’ ದಲ್ಲಿ ಸಂಜೆ ಆರು ಗಂಟೆಗೆ ‘ಪುನೀತ ಪರ್ವ’ ಕಾರ್ಯಕ್ರಮ ಆರಂಭವಾಗಲಿದ್ದು, ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಒಳ ಬಿಡಲಾಗುವುದು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...